ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಮುನಿಸು

ಹೊಯ್ಸಳ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆದ ದೇವೇಗೌಡರ ಕುಟುಂಬ
Last Updated 4 ಮೇ 2019, 15:23 IST
ಅಕ್ಷರ ಗಾತ್ರ

ಹಾಸನ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಮುನಿಸು ಮುಂದುವರಿಸಿದ್ದಾರೆ.

ಚಿಕ್ಕಮಗಳೂರಿನ ಉಮಾ ಮಹೇಶ್ವರಿ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಸಂಜೆ ಹಾಸನ ಹೊರ ವಲಯದಲ್ಲಿರುವ ಹೊಯ್ಸಳ ರೆಸಾರ್ಟ್ ಗೆ ಭೇಟಿ ನೀಡಿದ್ದರು.

ತಂದೆ, ಸಂಸದ ಎಚ್.ಡಿ.ದೇವೇಗೌಡರು, ತಾಯಿ ಚೆನ್ನಮ್ಮ, ಸೋದರ ಸಚಿವ ರೇವಣ್ಣ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು.

ಸುಮಾರು ಅರ್ಧ ಗಂಟೆಗೂ ಹೆಚ್ಚು ಹೋಟೆಲ್ ನಲ್ಲಿ ಇದ್ದು ಚಹಾ ಕುಡಿದು ಲಘು ವಿಶ್ರಾಂತಿ ಪಡೆದ ಕುಮಾರಸ್ವಾಮಿ, ನಂತರ ಕುಟುಂಬ ಸಮೇತರಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು. ಇದರಿಂದಾಗಿ ಕೆಲ ದಿನಗಳಿಂದ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎನ್ನುವ ಮುನಿಸನ್ನು ಕುಮಾರಸ್ವಾಮಿ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT