ಮಂಜ್ರಾಬಾದ್ ಕೋಟೆ ಅಭಿವೃದ್ಧಿಗೆ ₹3 ಕೋಟಿ, ದೇವಾಲದಕೆರೆ ಬಳಿ ಬಿಳಿಸಾರೆ ಪಾಲ್ಸ್ ಅಭಿವೃದ್ಧಿಗೆ ₹75 ಲಕ್ಷ, ಬೆಟ್ಟದ ಬೈರವೇಶ್ವರ ದೇವಸ್ಥಾನ ರಸ್ತೆ ಮತ್ತು ವೀಕ್ಷಣಾ ಗೋಪುರ ಅಭಿವೃದ್ಧಿಗೆ ₹1.50 ಕೋಟಿ, ಅತ್ತಿಹಳ್ಳಿ ಸಮೀಪದ ಮೂಕನಮನೆ ಫಾಲ್ಸ್ ಅಭಿವೃದ್ಧಿಗೆ ₹30 ಲಕ್ಷ ಬಿಡುಗಡೆಯಾಗಿದೆ ಎಂದು ಹೇಳಿದರು.ಹಾನುಬಾಳು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಬಿ.ರಾಜೀವ್, ಜಿ.ಪಂ. ಮಾಜಿ ಸದಸ್ಯ ಕೆ.ಎಸ್. ಕುಮಾರಸ್ವಾಮಿ, ಗ್ರಾಮದ ಮುಖಂಡರಾದ ಎ.ಕೆ.ಸಚ್ಚಿದೇವ್, ಅ.ಸಿ. ಮೋಹನ್ ಹಾಗೂ ಇತರರು ಇದ್ದರು.