<p><strong>ಶ್ರವಣಬೆಳಗೊಳ: </strong>ಒನ್ ಟೈಮ್ ಎಟಿಎಂಗಳನ್ನು ಸ್ಥಾಪಿಸಲೆಂದು ಮಹಾರಾಷ್ಟ್ರದಿಂದ ಬಂದಿದ್ದ ಜೈಶ್ ಠಾಕೂರ್, ಲಾಕ್ಡೌನ್ ಘೋಷಣೆಯಿಂದಾಗಿ ಶ್ರವಣಬೆಳಗೊಳ ದಲ್ಲಿಯೇ ಉಳಿದಿದ್ದು, ಊಟ, ವಸತಿಗೆ ಪರದಾಡುತ್ತಿದ್ದಾರೆ.</p>.<p>ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವತ್ಸಾಯ್ ಗಾಂವ್ನ 42 ವರ್ಷದ ಜೈಶ್ ಠಾಕೂರ್ ಮುಂಬೈನ ಬೋರಾ ಪ್ಲಾಸ್ಟ್ ಕಂಪನಿ ಎಟಿಎಂಗಳ ನಿರ್ವಹಣೆಯ ಜೋಡಣಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 3ರಂದು ಹಾಸನ ನಗರಕ್ಕೆ ಬಂದಿದ್ದು, ಜಿಲ್ಲೆಯ ವಿವಿಧೆಡೆ ಎಟಿಎಂಗಳನ್ನು ಸ್ಥಾಪಿಸಿದ್ದಾರೆ. ಮಾರ್ಚ್ 22ರಂದು ಶ್ರವಣಬೆಳಗೊಳದ ಬಸ್ ನಿಲ್ದಾಣ ಮುಂಭಾಗದಲ್ಲಿ ಎಟಿಎಂ ಸ್ಥಾಪಿಸಿದ್ದರು.</p>.<p>‘ನನ್ನ ಮೊಬೈಲ್ ಸಹ ಕಳವಾಗಿದ್ದು, ದಿಕ್ಕು ತೋಚದಂತಾಗಿದೆ. ಬಯಲೇ ಮನೆಯಾಗಿದ್ದು, ಊಟಕ್ಕೂ ತೊಂದರೆಯಾಗಿದೆ’ ಎಂದು ಠಾಕೂರ್ ಅಳಲು ತೋಡಿಕೊಂಡರು.</p>.<p>ಪಟ್ಟಣದ ಬಸ್ ನಿಲ್ದಾಣ ದಲ್ಲಿರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಹಾರದ ಜೈಕುಮಾರ ಚೌಧರಿ ಅವರು ಠಾಕೂರ್ ಅವರಿಗೆ ಆಶ್ರಯ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ: </strong>ಒನ್ ಟೈಮ್ ಎಟಿಎಂಗಳನ್ನು ಸ್ಥಾಪಿಸಲೆಂದು ಮಹಾರಾಷ್ಟ್ರದಿಂದ ಬಂದಿದ್ದ ಜೈಶ್ ಠಾಕೂರ್, ಲಾಕ್ಡೌನ್ ಘೋಷಣೆಯಿಂದಾಗಿ ಶ್ರವಣಬೆಳಗೊಳ ದಲ್ಲಿಯೇ ಉಳಿದಿದ್ದು, ಊಟ, ವಸತಿಗೆ ಪರದಾಡುತ್ತಿದ್ದಾರೆ.</p>.<p>ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವತ್ಸಾಯ್ ಗಾಂವ್ನ 42 ವರ್ಷದ ಜೈಶ್ ಠಾಕೂರ್ ಮುಂಬೈನ ಬೋರಾ ಪ್ಲಾಸ್ಟ್ ಕಂಪನಿ ಎಟಿಎಂಗಳ ನಿರ್ವಹಣೆಯ ಜೋಡಣಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 3ರಂದು ಹಾಸನ ನಗರಕ್ಕೆ ಬಂದಿದ್ದು, ಜಿಲ್ಲೆಯ ವಿವಿಧೆಡೆ ಎಟಿಎಂಗಳನ್ನು ಸ್ಥಾಪಿಸಿದ್ದಾರೆ. ಮಾರ್ಚ್ 22ರಂದು ಶ್ರವಣಬೆಳಗೊಳದ ಬಸ್ ನಿಲ್ದಾಣ ಮುಂಭಾಗದಲ್ಲಿ ಎಟಿಎಂ ಸ್ಥಾಪಿಸಿದ್ದರು.</p>.<p>‘ನನ್ನ ಮೊಬೈಲ್ ಸಹ ಕಳವಾಗಿದ್ದು, ದಿಕ್ಕು ತೋಚದಂತಾಗಿದೆ. ಬಯಲೇ ಮನೆಯಾಗಿದ್ದು, ಊಟಕ್ಕೂ ತೊಂದರೆಯಾಗಿದೆ’ ಎಂದು ಠಾಕೂರ್ ಅಳಲು ತೋಡಿಕೊಂಡರು.</p>.<p>ಪಟ್ಟಣದ ಬಸ್ ನಿಲ್ದಾಣ ದಲ್ಲಿರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಹಾರದ ಜೈಕುಮಾರ ಚೌಧರಿ ಅವರು ಠಾಕೂರ್ ಅವರಿಗೆ ಆಶ್ರಯ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>