ಹೊಳೆನರಸೀಪುರ ತಾಲ್ಲೂಕಿನಲ್ಲಿ 29 ಮನೆಗಳಿಗೆ ಹಾನಿಯಾಗಿದ್ದು, ಅಲ್ಲಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿದ್ದೇನೆ. ಅರಕಲಗೂಡು ತಾಲ್ಲೂಕಿನಲ್ಲಿ 80ಕ್ಕೂ ಹೆಚ್ಚು, ಸಕಲೇಶಪುರ, 19, ಚನ್ನರಾಯಪಟ್ಟಣದಲ್ಲಿ 2 ಮನೆಗಳಿಗೆ ಹಾನಿಯಾಗಿದೆ. ಮಳೆಯ ಪ್ರಮಾಣ ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳು ತಕ್ಷಣ ಭೇಟಿ ಕೊಡಬೇಕು. ಹಾನಿಯಾದ 2 ದಿನಗಳಲ್ಲಿ ಫೋಟೋ ಸಮೇತ ವರದಿ ನೀಡಬೇಕು. ಅಧಿಕಾರಿಗಳು ವರದಿ ನೀಡುವ ಮತ್ತು ಪರಿಹಾರ ನೀಡುವ ಕೆಲಸವನ್ನು ಶೀಘ್ರದಲ್ಲಿ ಮಾಡುವಂತೆ ಆದೇಶಿಸಲಾಗಿದೆ ಎಂದರು.