ಮಲೆನಾಡಿನ ಪ್ರಮುಖ ಬೆಳೆಗಳಾದ ಕಾಫಿ, ಏಲಕ್ಕಿ ಮತ್ತು ಅಡಿಕೆ ಮೇಲೆ ರೈತರು ಪಡೆದಿರುವ ₹ 6,500 ಕೋಟಿ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮನ್ನಾ ಮಾಡಿ ಹೊಸ ಸಾಲ ಮಂಜೂರಾತಿಗೆ ಅವಕಾಶ ಮಾಡಿಕೊಡಬೇಕು. ರೈತರು, ಕಾರ್ಮಿಕರ ವಸತಿ, ಸರ್ಕಾರಿ ಶಾಲೆಗಳ ಪುನರ್ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಬೇಕು. ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯಿತಿ ರಸ್ತೆಗಳ ಪುನರ್ ನಿರ್ಮಾಣ, ದುರಸ್ತಿ ಹಾಗೂ ಸೇತುವೆಗಳನ್ನು ನಿರ್ಮಾಣ ಮಾಡಲು ₹ 250 ಕೋಟಿ ಬಿಡುಗಡೆ ಮಾಡಬೇಕು ಎಂದು ಹೇಳಿದರು.