<p><strong>ಹೆತ್ತೂರು</strong>: ಯಸಳೂರು, ಹೆತ್ತೂರು ಹೋಬಳಿಯ ವಿವಿಧ ಭಾಗಗಳಲ್ಲಿ ಬುಧವಾರ ಧಾರಾಕಾರ ಮಳೆ ಸುರಿಯಿತಿ. ಬೆಳಿಗ್ಗೆಯಿಂದ ಬಿಸಿಲು ಇದ್ದು, ಮಧ್ಯಾಹ್ನ ನಂತರ ಮೋಡದ ವಾತಾವರಣ ಶುರುವಾಯಿತು.</p>.<p>ಸಂಜೆ 4 ಗಂಟೆ ನಂತರ ಹಾಡ್ಯ, ಲಕ್ಷ್ಮೀ ಪುರದಲ್ಲಿ ಆರಂಭವಾದ ಮಳೆಯು ಗುರುವಾರ ಬೆಳಿಗ್ಗೆ 3 ಗಂಟೆ ಸಮಯದಲ್ಲಿ ಒಂದು ಗಂಟೆಗೂ ಅಧಿಕ ಕಾಲ ರಭಸವಾಗಿ ಸುರಿಯಿತು. ಚರಂಡಿಗಳೆಲ್ಲವೂ ಉಕ್ಕಿ ಹರಿಯುವಂತಾಯಿತು.</p>.<p>ಧಾರಾಕಾರ ಮಳೆಯಿಂದಾಗಿ ಅರೇಬಿಕಾ ಕಾಫಿಗೆ ಹೊಡೆತ ಬಿದ್ದಿದ್ದು, ಹಣ್ಣಾಗುತ್ತಿದ್ದ ಕಾಫಿ ನೆಲಕಚ್ಚುವಂತೆ ಮಾಡಿದೆ. ರೊಬಸ್ಟಾ ಕಾಫಿಗೆ ಕೊಳೆ ರೋಗ ಬರುತ್ತಿದೆ.</p>.<p>‘ಈ ಮಳೆಯು ಕಾಫಿ ಬೆಳೆಗೆ ಮಾರಕವಾಗಿದೆ. ಕಳೆದ ವಾರದ ಬಿಸಿಲಿಗೆ ಅರೇಬಿಕಾ ಕಾಯಿ ಬಲಿತಿತ್ತು. ಈಗ ಮಳೆಯಾಗಿದ್ದರಿಂದ ಕೂಡಲೇ ಹಣ್ಣಾಗುತ್ತದೆ. ಮಳೆ ಮುಂದುವರಿದರೆ ಕೊಯ್ಲಿಗೆ ಕಷ್ಟವಾಗುತ್ತದೆ’ ಎನ್ನುತ್ತಾರೆ ಕಾಫಿ ಬೆಳೆಗಾರ ಎಚ್.ಬಿ ಪವನ್.</p>.<p>ಹೋಬಳಿಯ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಪೈಪ್ಲೈನ್ ಅಳವಡಿಕೆಗೆ ನೆಲ ಅಗೆದಿದ್ದು, ರಸ್ತೆಗಳು ಕೆಸರುಮಯವಾಗಿವೆ. ಇದರಿಂದ ನಿವಾಸಿಗಳು ಸಂಕಷ್ಟ ಪಡುವಂತಾಯಿತು. ಹೆತ್ತೂರು ಗ್ರಾಮದಲ್ಲಿ ಬುಧವಾರ 5 ಸೆಂ.ಮೀ. ಮಳೆಯಾಗಿದೆ. ಈ ವರ್ಷ ಇದುವರೆಗೆ ಗ್ರಾಮದಲ್ಲಿ 447.5 ಸೆಂ.ಮೀ. ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು</strong>: ಯಸಳೂರು, ಹೆತ್ತೂರು ಹೋಬಳಿಯ ವಿವಿಧ ಭಾಗಗಳಲ್ಲಿ ಬುಧವಾರ ಧಾರಾಕಾರ ಮಳೆ ಸುರಿಯಿತಿ. ಬೆಳಿಗ್ಗೆಯಿಂದ ಬಿಸಿಲು ಇದ್ದು, ಮಧ್ಯಾಹ್ನ ನಂತರ ಮೋಡದ ವಾತಾವರಣ ಶುರುವಾಯಿತು.</p>.<p>ಸಂಜೆ 4 ಗಂಟೆ ನಂತರ ಹಾಡ್ಯ, ಲಕ್ಷ್ಮೀ ಪುರದಲ್ಲಿ ಆರಂಭವಾದ ಮಳೆಯು ಗುರುವಾರ ಬೆಳಿಗ್ಗೆ 3 ಗಂಟೆ ಸಮಯದಲ್ಲಿ ಒಂದು ಗಂಟೆಗೂ ಅಧಿಕ ಕಾಲ ರಭಸವಾಗಿ ಸುರಿಯಿತು. ಚರಂಡಿಗಳೆಲ್ಲವೂ ಉಕ್ಕಿ ಹರಿಯುವಂತಾಯಿತು.</p>.<p>ಧಾರಾಕಾರ ಮಳೆಯಿಂದಾಗಿ ಅರೇಬಿಕಾ ಕಾಫಿಗೆ ಹೊಡೆತ ಬಿದ್ದಿದ್ದು, ಹಣ್ಣಾಗುತ್ತಿದ್ದ ಕಾಫಿ ನೆಲಕಚ್ಚುವಂತೆ ಮಾಡಿದೆ. ರೊಬಸ್ಟಾ ಕಾಫಿಗೆ ಕೊಳೆ ರೋಗ ಬರುತ್ತಿದೆ.</p>.<p>‘ಈ ಮಳೆಯು ಕಾಫಿ ಬೆಳೆಗೆ ಮಾರಕವಾಗಿದೆ. ಕಳೆದ ವಾರದ ಬಿಸಿಲಿಗೆ ಅರೇಬಿಕಾ ಕಾಯಿ ಬಲಿತಿತ್ತು. ಈಗ ಮಳೆಯಾಗಿದ್ದರಿಂದ ಕೂಡಲೇ ಹಣ್ಣಾಗುತ್ತದೆ. ಮಳೆ ಮುಂದುವರಿದರೆ ಕೊಯ್ಲಿಗೆ ಕಷ್ಟವಾಗುತ್ತದೆ’ ಎನ್ನುತ್ತಾರೆ ಕಾಫಿ ಬೆಳೆಗಾರ ಎಚ್.ಬಿ ಪವನ್.</p>.<p>ಹೋಬಳಿಯ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಪೈಪ್ಲೈನ್ ಅಳವಡಿಕೆಗೆ ನೆಲ ಅಗೆದಿದ್ದು, ರಸ್ತೆಗಳು ಕೆಸರುಮಯವಾಗಿವೆ. ಇದರಿಂದ ನಿವಾಸಿಗಳು ಸಂಕಷ್ಟ ಪಡುವಂತಾಯಿತು. ಹೆತ್ತೂರು ಗ್ರಾಮದಲ್ಲಿ ಬುಧವಾರ 5 ಸೆಂ.ಮೀ. ಮಳೆಯಾಗಿದೆ. ಈ ವರ್ಷ ಇದುವರೆಗೆ ಗ್ರಾಮದಲ್ಲಿ 447.5 ಸೆಂ.ಮೀ. ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>