ಸಕಲೇಶಪುರ ತಾಲ್ಲೂಕಿನ ಬಾಳೆಗದ್ದೆ ನಿವಾಸಿ ದಿನೇಶ್ ಎಂಬುವವರಿಗೆ ಸೇರಿದ್ದ ₹ 16.80 ಲಕ್ಷ ಹಣವನ್ನು ಲಪಟಾಯಿಸಲು ಮಹಮದ್ ಸಂಚು ರೂಪಿಸಿದ್ದ. ಡಿ. 2ರಂದು ದಿನೇಶ್ ಅವರನ್ನು ಭೇಟಿಯಾಗಿದ್ದ ಮಹಮದ್ ತಾರಿಕ್ ಕಾಳುಮೆಣಸನ್ನು ಮಾರಾಟ ಮಾಡಿಕೊಡುತ್ತೇನೆಂದು ಹೇಳಿ ತೆಗೆದುಕೊಂಡು ಹೋಗಿದ್ದ. ಚಿಕ್ಕಮಗಳೂರಿನಲ್ಲಿ ಕಾಳುಮೆಣಸು ಮಾರಾಟ ಮಾಡಿ, ವಾಪಸ್ ಬರುವಾಗ ರಾತ್ರಿ ತಾಲ್ಲೂಕಿನ ಫಾತೀಮಾಪುರದ ಬಳಿ ಕಾರು ಅಪಘಾತವಾಗಿದೆ. ಇದೇ ಸಮಯವನ್ನು ಉಪಯೋಗಿಸಿಕೊಂಡ ತಾರಿಕ್, ತನ್ನ ಮೇಲೆ ಅಪರಿಚಿತರು ಹಲ್ಲೆ ನಡೆಸಿ, ಹಣ ತೆಗೆದುಕೊಂಡು ಹೋಗಿದ್ದಾರೆ. ತಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ದೂರವಾಣಿ ಮೂಲಕ ದಿನೇಶ್ ಅವರಿಗೆ ವಿಷಯ ತಿಳಿಸಿದ್ದ.