<p><strong>ಸಕಲೇಶಪುರ (ಹಾಸನ ಜಿಲ್ಲೆ):</strong> ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಗರಿಗಳನ್ನು ಕತ್ತರಿಸಲು ತೆಂಗಿನ ಮರ ಏರಿದ್ದ ವ್ಯಕ್ತಿ ಪ್ರಖರ ಬಿಸಿಲಿನ ಕಾರಣದಿಂದಾಗಿ ಪ್ರಜ್ಞೆ ತಪ್ಪಿ ಅಲ್ಲೇ ಸಿಲುಕಿ ನೇತಾಡುತ್ತಿದ್ದ ಘಟನೆ ಭಾನುವಾರ ನಡೆದಿದೆ.</p>.<p>ಸುಮಾರು 50 ಅಡಿ ಎತ್ತರದ ಮರದ ಮೇಲೆ ನೇತಾಡುತ್ತಿದ್ದ ಆ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕೆಳಗಿಳಿಸಿ ಪ್ರಾಣಾಪಾಯದಿಂದ ಪಾರು ಮಾಡಿದರು.</p>.<p>ಕೊಲ್ಲಹಳ್ಳಿ ಗ್ರಾಮದ ನಿವಾಸಿ ನವೀನ್ ಸಾವಿನ ದವಡೆಯಿಂದ ಪಾರಾಗಿ ಬಂದವರು. ಮಂಜು ಎನ್ನುವವರಿಗೆ ಸೇರಿದ ಮರ ಏರಿ ಗರಿಗಳನ್ನು ಕತ್ತರಿಸಿ ಕೆಳಕ್ಕಿಳಿಯುವ ವೇಳೆ ಅವರಿಗೆ ಬಿಸಿಲಿನ ತಾಪದಿಂದ ಸುಸ್ತಾಗಿದೆ. ಪ್ರಜ್ಞಾಹೀನರಾಗಿದ್ದ ಅವರು, ಮರದಲ್ಲಿ ಕತ್ತರಿಸಿದ್ದ ಗರಿಗಳ ನಡುವೆ ಸಿಕ್ಕಿಹಾಕಿಕೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.</p>.<p>ಅಗ್ನಿಶಾಮಕ ಠಾಣಾಧಿಕಾರಿ ಪ್ರತೀಕ್ ತಹಶೀಲ್ದಾರ್, ಸಹಾಯಕ ಠಾಣಾಧಿಕಾರಿ ರಾಜು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ (ಹಾಸನ ಜಿಲ್ಲೆ):</strong> ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಗರಿಗಳನ್ನು ಕತ್ತರಿಸಲು ತೆಂಗಿನ ಮರ ಏರಿದ್ದ ವ್ಯಕ್ತಿ ಪ್ರಖರ ಬಿಸಿಲಿನ ಕಾರಣದಿಂದಾಗಿ ಪ್ರಜ್ಞೆ ತಪ್ಪಿ ಅಲ್ಲೇ ಸಿಲುಕಿ ನೇತಾಡುತ್ತಿದ್ದ ಘಟನೆ ಭಾನುವಾರ ನಡೆದಿದೆ.</p>.<p>ಸುಮಾರು 50 ಅಡಿ ಎತ್ತರದ ಮರದ ಮೇಲೆ ನೇತಾಡುತ್ತಿದ್ದ ಆ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕೆಳಗಿಳಿಸಿ ಪ್ರಾಣಾಪಾಯದಿಂದ ಪಾರು ಮಾಡಿದರು.</p>.<p>ಕೊಲ್ಲಹಳ್ಳಿ ಗ್ರಾಮದ ನಿವಾಸಿ ನವೀನ್ ಸಾವಿನ ದವಡೆಯಿಂದ ಪಾರಾಗಿ ಬಂದವರು. ಮಂಜು ಎನ್ನುವವರಿಗೆ ಸೇರಿದ ಮರ ಏರಿ ಗರಿಗಳನ್ನು ಕತ್ತರಿಸಿ ಕೆಳಕ್ಕಿಳಿಯುವ ವೇಳೆ ಅವರಿಗೆ ಬಿಸಿಲಿನ ತಾಪದಿಂದ ಸುಸ್ತಾಗಿದೆ. ಪ್ರಜ್ಞಾಹೀನರಾಗಿದ್ದ ಅವರು, ಮರದಲ್ಲಿ ಕತ್ತರಿಸಿದ್ದ ಗರಿಗಳ ನಡುವೆ ಸಿಕ್ಕಿಹಾಕಿಕೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.</p>.<p>ಅಗ್ನಿಶಾಮಕ ಠಾಣಾಧಿಕಾರಿ ಪ್ರತೀಕ್ ತಹಶೀಲ್ದಾರ್, ಸಹಾಯಕ ಠಾಣಾಧಿಕಾರಿ ರಾಜು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>