ಭಾನುವಾರ ಆಗಿರುವುದರಿಂದ ಸರ್ಕಾರಿ, ಖಾಸಗಿ ಉದ್ಯೋಗಿಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು ಮನೆಯಿಂದ ಹೊರಬಂದಿಲ್ಲ. ಆದರೆ, ಮನೆಯಲ್ಲೂ ವಿಪರೀತ ಚಳಿ ಇದ್ದು, ಉಷ್ಣಾಂಶ ಗಣನೀಯವಾಗಿ ಕುಸಿದಿದೆ. ಇನ್ನೂ ಎರಡು ದಿನ ಇದೇ ರೀತಿ ಮಳೆ ಮುಂದುವರಿದಲ್ಲಿ ಕಾಫಿ, ಜೋಳ, ರಾಗಿ ಸೇರಿದಂತೆ ಇತರೆ ದ್ವಿದಳ ಧಾನ್ಯಗಳಿಗೆ ಮಾರಕ ಆಗಬಹುದು ಎನ್ನುವ ಆತಂಕ ರೈತರನ್ನು ಕಾಡುತ್ತಿದೆ.