‘ಮಂಗಳೂರು ಗೋಲಿಬಾರ್ ಪ್ರಕರಣ ಹಿನ್ನೆಲೆಯಲ್ಲಿ ಸರ್ಕಾರ ಪೊಲೀಸರಿಗೆ ಬಹುಮಾನ ಘೋಷಣೆ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದ ಮಾಧುಸ್ವಾಮಿ, ‘ಉತ್ತರ ಪ್ರದೇಶ ಮಾದರಿಯಲ್ಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದರೆ ಆಸ್ತಿ ಮುಟ್ಟುಗೋಲಿಗೆ ಸಂಬಂಧಿಸಿದಂತೆ ಸದ್ಯಕ್ಕೆ ನಾವು ಐಪಿಸಿ ಸೆಕ್ಷೆನ್ 2(a) ಗೆ ಬದ್ಧರಾಗಿದ್ದೇವೆ. ಇದರ ಪ್ರಕಾರ ಕ್ರಿಮಿನಲ್ ಕೇಸ್ ಮಾಡುವುದಕ್ಕೆ ಅವಕಾಶ ಇದೆ. ಮುಂದೆ ಸರ್ಕಾರಿ ಆಸ್ತಿ ಪಾಸ್ತಿ ರಕ್ಷಣೆ ಗೆ ಕಾನೂನು ತಿದ್ದುಪಡಿ ಅಗತ್ಯವಾದರೆ ಆ ಬಗ್ಗೆ ಚರ್ಚೆ ನಡೆಯಬೇಕು. ಅದಾದ ಬಳಿಕ ಕಾನೂನು ಜಾರಿಯಾದರೆ ಅದು ಎಲ್ಲರಿಗೂ ಅನ್ವಯಿಸುತ್ತೆ’ ಎಂದರು.