ಜಿಲ್ಲಾ ಬಿಜೆಪಿ ಘಟಕ ವಿರೋಧ ಮಾಡಿದ ಕೆಲವೇ ಹೊತ್ತಿನಲ್ಲಿ ಹಾಸನದಲ್ಲಿ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ, ಪೂಜೆ
ಸಲ್ಲಿಸಿದ ಬಳಿಕ ಮಾತನಾಡಿದ ಮಂಜು, ‘ಮೂರು ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಚರ್ಚಿಸಿದ್ದು ನಿಜ. ಕಾರ್ಯಕರ್ತರು, ಹಿತೈಶಿಗಳು, ಸ್ನೇಹಿತರ ಜತೆ ಚರ್ಚಿಸಿ ಎರಡು ದಿನದಲ್ಲಿ ನಿರ್ಧಾರ ತಿಳಿಸುವೆ’ ಎನ್ನುವ ಮೂಲಕ ಮಂಜು ಬಿಜೆಪಿ ಸೇರುವ ಸುಳಿವು ನೀಡಿದರು.