‘ಪಕ್ಷದ ಸಿದ್ದಾಂತ ಒಪ್ಪಿ ಬಿಜೆಪಿ ಸದಸ್ಯತ್ವ ಪಡೆದಿದ್ದೇನೆ. ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಬೆಂಬಲಿಗರೊಂದಿಗೆ ಬಿಜೆಪಿ ಸೇರುವ ದಿನ ಪ್ರಕಟಿಸಲಾಗುವುದು. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಫ್ಯಾಕ್ಸ್ ಮೂಲಕ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಒಂದು ಕುಟುಂಬ ಬಲಪಡಿಸಲು ಮೈತ್ರಿ ಬಳಕೆಯಾಗುತ್ತಿದೆ. ಆ ಕಾರಣದಿಂದ ಪಕ್ಷ ತೊರೆಯುತ್ತಿದ್ದೇನೆ. ಕಾಂಗ್ರೆಸ್ನ ಈ ಮೈತ್ರಿ ಮುಂದುವರೆದರೆ ಪಕ್ಷಕ್ಕೆ ಮಾರಕವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷರಿಗೂ ಹೇಳಿದ್ದೇನೆ’ ಎಂದರು.