ಭಾನುವಾರ ಬೆಳಿಗ್ಗೆಯಿಂದಲೇ ಪೂಜೆಯ ಕೈಂಕರ್ಯಗಳು ಜರುಗಿದವು. ಭಕ್ತರು ಹಣ್ಣು, ಕಾಯಿ ಅರ್ಪಿಸಿ ದೇವರ ದರ್ಶನ ಪಡೆದರು. ನಂತರ ಪ್ರಸಾದ ವಿನಿಯೋಗಿಸಲಾಯಿತು. ಜಾತ್ರೆ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ರಕ್ತದೊತ್ತಡ, ಮಧುಮೇಹ, ಇಸಿಜಿ ಪರೀಕ್ಷೆ ಮತ್ತು ನೇತ್ರ ತಪಾಸಣೆ ನಡೆಸಲಾಯಿತು. ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.