<p><strong>ಅರಸೀಕೆರೆ:</strong> ‘ಗಾಂಧೀಜಿಯವರ ಜೀವನದ ಮೌಲ್ಯಗಳು ಇಂದಿಗೂ ಸಾರ್ವಕಾಲಿಕ ಸತ್ಯ. ಅವರ ಜೀವನವನ್ನು ಅರಿತರೆ ನಾವು ನಮ್ಮ ಬದುಕನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಬಹುದು’ ಎಂದು ತಹಶೀಲ್ದಾರ್ ಎಂ.ಜಿ.ಸಂತೋಷ್ಕುಮಾರ್ ಹೇಳಿದರು.</p>.<p>ನಗರದ ಕಸ್ತೂರಬಾ ಟ್ರಸ್ಟ್ನಲ್ಲಿ ಶುಕ್ರವಾರ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ದೇಶದ ರಕ್ಷಣೆಯಲ್ಲಿ ಅದೆಷ್ಟೋ ಸೈನಿಕರು ಪ್ರಾಣ ತೆತ್ತಿದ್ದಾರೆ. ಅವರನ್ನು ಸ್ಮರಣೆ ಮಾಡಿ ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ’ ಎಂದರು.</p>.<p>ಅನಂತ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಆರ್.ಅನಂತಕುಮಾರ್ ಮಾತನಾಡಿ, ‘ಸ್ವಾತಂತ್ರ್ಯಕ್ಕಾಗಿ ವೀರ ಮರಣ ಹೊಂದಿದವರ ಇತಿಹಾಸವನ್ನು ಮುಂದಿನ ಮಕ್ಕಳಿಗೆ ಪರಿಚಯಿಸುವುದು ಅತ್ಯಗತ್ಯ’ ಎಂದರು. </p>.<p>ಹುತಾತ್ಮರಾದ ಮಹಾತ್ಮರ ಗೌರವಾರ್ಥ 3 ನಿಮಿಷಗಳ ಮೌನ ಆಚರಿಸಲಾಯಿತು. ಹಾಸನ ಜಿಲ್ಲಾ ಅಸಿಸ್ಟೆಂಟ್ ಕಮೀಷನರ್ ಜಗದೀಶ್, ಆಶ್ರಮದ ಪ್ರತಿನಿಧಿಗಳು ಮತ್ತು ಉಪಪ್ರತಿನಿಧಿಗಳು, ಅನಂತ್ ಸದ್ವಿದ್ಯಾ ಬಿ.ಇಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.</p>.<p>ಅರಸೀಕೆರೆ ನಗರದ ಕಸ್ತೂರಬಾ ಶಿಬಿರದಲ್ಲಿ ಗಾಂಧೀಜಿ ಪ್ರತಿಮೆ ಎದುರು ಹುತಾತ್ಮ ದಿನಾಚರಣೆ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ‘ಗಾಂಧೀಜಿಯವರ ಜೀವನದ ಮೌಲ್ಯಗಳು ಇಂದಿಗೂ ಸಾರ್ವಕಾಲಿಕ ಸತ್ಯ. ಅವರ ಜೀವನವನ್ನು ಅರಿತರೆ ನಾವು ನಮ್ಮ ಬದುಕನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಬಹುದು’ ಎಂದು ತಹಶೀಲ್ದಾರ್ ಎಂ.ಜಿ.ಸಂತೋಷ್ಕುಮಾರ್ ಹೇಳಿದರು.</p>.<p>ನಗರದ ಕಸ್ತೂರಬಾ ಟ್ರಸ್ಟ್ನಲ್ಲಿ ಶುಕ್ರವಾರ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ದೇಶದ ರಕ್ಷಣೆಯಲ್ಲಿ ಅದೆಷ್ಟೋ ಸೈನಿಕರು ಪ್ರಾಣ ತೆತ್ತಿದ್ದಾರೆ. ಅವರನ್ನು ಸ್ಮರಣೆ ಮಾಡಿ ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ’ ಎಂದರು.</p>.<p>ಅನಂತ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಆರ್.ಅನಂತಕುಮಾರ್ ಮಾತನಾಡಿ, ‘ಸ್ವಾತಂತ್ರ್ಯಕ್ಕಾಗಿ ವೀರ ಮರಣ ಹೊಂದಿದವರ ಇತಿಹಾಸವನ್ನು ಮುಂದಿನ ಮಕ್ಕಳಿಗೆ ಪರಿಚಯಿಸುವುದು ಅತ್ಯಗತ್ಯ’ ಎಂದರು. </p>.<p>ಹುತಾತ್ಮರಾದ ಮಹಾತ್ಮರ ಗೌರವಾರ್ಥ 3 ನಿಮಿಷಗಳ ಮೌನ ಆಚರಿಸಲಾಯಿತು. ಹಾಸನ ಜಿಲ್ಲಾ ಅಸಿಸ್ಟೆಂಟ್ ಕಮೀಷನರ್ ಜಗದೀಶ್, ಆಶ್ರಮದ ಪ್ರತಿನಿಧಿಗಳು ಮತ್ತು ಉಪಪ್ರತಿನಿಧಿಗಳು, ಅನಂತ್ ಸದ್ವಿದ್ಯಾ ಬಿ.ಇಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.</p>.<p>ಅರಸೀಕೆರೆ ನಗರದ ಕಸ್ತೂರಬಾ ಶಿಬಿರದಲ್ಲಿ ಗಾಂಧೀಜಿ ಪ್ರತಿಮೆ ಎದುರು ಹುತಾತ್ಮ ದಿನಾಚರಣೆ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>