ಹಾಸನ: ನಗರದ ಹದಿನೈದು ಮಸೀದಿಗಳಿಗೆ ಶಾಸಕರಾದ ಸೋಮಶೇಖರ್ ರೆಡ್ಡಿ ಹಾಗೂ ಆನಂದ್ ಸಿಂಗ್ ಅವರ ಹೆಸರಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಬೆದರಿಕೆ ಹಾಕಿರುವ ಅಂಚೆ ಪತ್ರಗಳು ಶುಕ್ರವಾರ ತಲುಪಿವೆ.
ಲಕೋಟೆಯ ಮೇಲೆ ಸೋಮಶೇಖರ್ ರೆಡ್ಡಿ ಅವರ ಹೆಸರಿದ್ದು, ಪತ್ರದ ಕೊನೆಯಲ್ಲಿ ಆನಂದ್ ಸಿಂಗ್ ಹೆಸರಿನಲ್ಲಿ ಸಹಿ ಮಾಡಲಾಗಿದೆ.
ಈ ಸಂಬಂಧ ಮುಸ್ಲಿಂ ನಾಯಕರು ಶನಿವಾರ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ ಸೆಪಟ್ ಅವರನ್ನು ಭೇಟಿ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ‘ಈ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆ ಮಾಡಲಾಗುವುದು’ ಎಂದು ಎಸ್ಪಿ ಭರವಸೆ ನೀಡಿದರು.
‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿಗೆ ತರುತ್ತಿರುವುದು ಖುಷಿ ಉಂಟು ಮಾಡಿದೆ. ಮುಸ್ಲಿಮರೆಲ್ಲ ಹಿಂದುಗಳಾಗಿ ಪರಿವರ್ತನೆಯಾಗಬೇಕು. ಮುಸ್ಲಿಮರ ಮನೆಯ ಹೆಣ್ಣು ಮಕ್ಕಳನ್ನು ಹಿಂದು ಯುವಕರಿಗೆ ಕೊಟ್ಟು ವಿವಾಹ ಮಾಡಬೇಕು. ಮಸೀದಿಗಳನ್ನೆಲ್ಲ ಹಿಂದು ದೇವಾಲಯಗಳಾಗಿ ಪರಿವರ್ತನೆ ಮಾಡಬೇಕು. ಮುಸ್ಲಿಮರು ಈ ದೇಶದಲ್ಲಿ ಉಳಿಯಬೇಕೆಂದರೆ ಹಿಂದೂ ಧರ್ಮ ಸ್ವೀಕರಿಸಬೇಕು. ಇಲ್ಲವಾದರೆ ದೇಶದಿಂದ ಹೊರಗೆ ಹೋಗಬೇಕಾಗುತ್ತದೆ’ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.