ಮುಸ್ಲಿಮ್ರಿಗೂ ಅದೇ ಜಾಗದಲ್ಲಿ ಮಸೀದಿ ನಿರ್ಮಿಸಬೇಕು ಎಂದೇನಿಲ್ಲ. ಅಯೋಧ್ಯೆಯಿಂದ ಸ್ವಲ್ಪ ದೂರದಲ್ಲಿ ಇದ್ದರೆ ಒಳ್ಳೆಯದು. ಸಮೀಪವಾದರೆ ಯಾವಾಗಲೂ ಘರ್ಷಣೆಯಾಗುತ್ತದೆ. ಮಸೀದಿಯೂ ಇರಲಿ, ಮಂದಿರವೂ ಇರಲಿ. ಎಲ್ಲರಿಗೂ ಒಪ್ಪಿಗೆ ಆಗುವಂತೆ ಸಂಧಾನ ಆಗಬೇಕು. ಸಮಿತಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡಬೇಕು. ಆದರೆ, ಸಮಿತಿಯ ಸಂಧಾನದಿಂದ ಅಯೋಧ್ಯೆ ಪರಿಸ್ಥಿತಿ ಬಗೆಯುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದರು.