ಮಡಿವಾಳ ಸಮಾಜದ ಪ್ರಮುಖ ಪಿ.ಬಿ.ಹೊಸೂರು ಮಾತನಾಡಿದರು. ಉಪ ತಹಶೀಲ್ದಾರ್ ಡಿ.ಆರ್.ಬೆಳ್ಳಿಮನೆ ಸ್ವಾಗತಿಸಿದರು. ವೆಂಕಟೇಶ ಮಡಿವಾಳ ಹಾಗೂ ಸುರೇಶ ಮಡಿವಾಳ ನಿರೂಪಿಸಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸುಧೀರ್ ಗೌಡರ್ ಅಧ್ಯಕ್ಷತೆ ವಹಿಸಿದ್ದರು. ಕೋಲಸಿರ್ಸಿ ಪಿಯು ಕಾಲೇಜಿನ ಪ್ರಾಂಶುಪಾಲ ಮಂಜಪ್ಪ ಎಂ.ಜಿ. ಉಪನ್ಯಾಸ ನೀಡಿದರು. ತಾಲ್ಲೂಕು ಪಂಚಾಯ್ತಿ ಇಒ ಶ್ರೀಧರ ಭಟ್, ತಹಶೀಲ್ದಾರ್ ಪಟ್ಟರಾಜ ಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ನಾಯ್ಕ ಉಪಸ್ಥಿತರಿದ್ದರು.