<p><strong>ಹಾಸನ: </strong>ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಚುನಾವಣಾ ಗಿಮಿಕ್<br />ಎಂದು ಶಾಸಕ ಎಚ್.ಡಿ.ರೇವಣ್ಣ ಟೀಕಿಸಿದರು.</p>.<p>‘ಹಿಂದೆ ಕಾಂಗ್ರೆಸ್ನವರು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆ ಎಂದು ಹೇಳಿ ಪಾದಯಾತ್ರೆ ಮಾಡಿದ್ದರು. ಅಧಿಕಾರಕ್ಕೆ ಬಂದರೆ ವರ್ಷಕ್ಕೆ ₹10 ಸಾವಿರ ಕೋಟಿಯಂತೆ ಐದು ವರ್ಷಕ್ಕೆ₹50 ಸಾವಿರ ಕೋಟಿ ನೀಡುತ್ತೇವೆ ಎಂದು ಹೇಳಿದ್ದರು. ಎಷ್ಟು ಕೊಟ್ಟಿದ್ದಾರೆ ಎಂಬುದುಅವರೇ ತಿಳಿಸಲಿ. ಉತ್ತರ ಕರ್ನಾಟಕ ಬಿಟ್ಟು ಈಗ ಮೇಕೆದಾಟು ಹಿಡಿದುಕೊಂಡಿದ್ದಾರೆ. ಯಾವಮುಖ ಇಟ್ಟುಕೊಂಡು ಪಾದಯಾತ್ರೆ ಹೊರಟಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿವಾಗ್ದಾಳಿ ನಡೆಸಿದರು.</p>.<p>‘ನಾನು ಇಂಧನ ಸಚಿವನಾಗಿದ್ದಾಗಲೇ ಕೆಪಿಟಿಸಿಎಲ್ ಮುಖ್ಯ ಎಂಜಿನಿಯರ್ ಕೆ.ಸಿ.ರೆಡ್ಡಿಅವರ ಜತೆ ಚರ್ಚಿಸಿ 500 ಮೆಗಾವಾಟ್ ವಿದ್ಯುತ್ ಉತ್ಪಾದನೆ ಯೋಜನೆ ರೂಪಿಸಲಾಗಿತ್ತು.ಗಿಮಿಕ್ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ಒಂದು ದಿನ ದಂಡ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿ ಅವರು ದೆಹಲಿಗೆ ನಿಯೋಗಕರೆದೊಯ್ದು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಹಾಗೂ ಕೋರ್ಟ್ಗೆ ವಾಸ್ತವಾಂಶಮನವರಿಕೆ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಮೂರನೇ ಅಲೆ ಆರಂಭವಾಗುವ ಮುನ್ನವೇ ಸಮುದಾಯ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹಾಸಿಗೆ, ಔಷಧ ಹಾಗೂ ಇತರೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.</p>.<p>ಮತಾಂತರ ನಿಷೇಧ ಮಸೂದೆಯನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲೇ ರೂಪಿಸಲಾಗಿತ್ತು. ಈಗ ಬಿಜೆಪಿಯವರು ಕಾಯ್ದೆ ಮಾಡಲು ಮುಂದಾಗಿದ್ದಾರೆ.ಕಾಂಗ್ರೆಸ್ನವರು ಕ್ರಿಶ್ಚಿಯನ್ನರಿಗೆ ಟೋಪಿ ಹಾಕಿದರು. ಇನ್ನು ಮುಸ್ಲಿಂರಿಗೆ ಯಾವಾಗ ಟೋಪಿ ಹಾಕುತ್ತಾರೋ ಎಂದು ವ್ಯಂಗ್ಯವಾಡಿದರು.</p>.<p>ಜಿಲ್ಲೆಗೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ ಕೊಡುಗೆನೋಡಿ ಜೆಡಿಎಸ್ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಸಮಾಮೇಶ ಆಯೋಜಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಚುನಾವಣಾ ಗಿಮಿಕ್<br />ಎಂದು ಶಾಸಕ ಎಚ್.ಡಿ.ರೇವಣ್ಣ ಟೀಕಿಸಿದರು.</p>.<p>‘ಹಿಂದೆ ಕಾಂಗ್ರೆಸ್ನವರು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆ ಎಂದು ಹೇಳಿ ಪಾದಯಾತ್ರೆ ಮಾಡಿದ್ದರು. ಅಧಿಕಾರಕ್ಕೆ ಬಂದರೆ ವರ್ಷಕ್ಕೆ ₹10 ಸಾವಿರ ಕೋಟಿಯಂತೆ ಐದು ವರ್ಷಕ್ಕೆ₹50 ಸಾವಿರ ಕೋಟಿ ನೀಡುತ್ತೇವೆ ಎಂದು ಹೇಳಿದ್ದರು. ಎಷ್ಟು ಕೊಟ್ಟಿದ್ದಾರೆ ಎಂಬುದುಅವರೇ ತಿಳಿಸಲಿ. ಉತ್ತರ ಕರ್ನಾಟಕ ಬಿಟ್ಟು ಈಗ ಮೇಕೆದಾಟು ಹಿಡಿದುಕೊಂಡಿದ್ದಾರೆ. ಯಾವಮುಖ ಇಟ್ಟುಕೊಂಡು ಪಾದಯಾತ್ರೆ ಹೊರಟಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿವಾಗ್ದಾಳಿ ನಡೆಸಿದರು.</p>.<p>‘ನಾನು ಇಂಧನ ಸಚಿವನಾಗಿದ್ದಾಗಲೇ ಕೆಪಿಟಿಸಿಎಲ್ ಮುಖ್ಯ ಎಂಜಿನಿಯರ್ ಕೆ.ಸಿ.ರೆಡ್ಡಿಅವರ ಜತೆ ಚರ್ಚಿಸಿ 500 ಮೆಗಾವಾಟ್ ವಿದ್ಯುತ್ ಉತ್ಪಾದನೆ ಯೋಜನೆ ರೂಪಿಸಲಾಗಿತ್ತು.ಗಿಮಿಕ್ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ಒಂದು ದಿನ ದಂಡ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿ ಅವರು ದೆಹಲಿಗೆ ನಿಯೋಗಕರೆದೊಯ್ದು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಹಾಗೂ ಕೋರ್ಟ್ಗೆ ವಾಸ್ತವಾಂಶಮನವರಿಕೆ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಮೂರನೇ ಅಲೆ ಆರಂಭವಾಗುವ ಮುನ್ನವೇ ಸಮುದಾಯ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹಾಸಿಗೆ, ಔಷಧ ಹಾಗೂ ಇತರೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.</p>.<p>ಮತಾಂತರ ನಿಷೇಧ ಮಸೂದೆಯನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲೇ ರೂಪಿಸಲಾಗಿತ್ತು. ಈಗ ಬಿಜೆಪಿಯವರು ಕಾಯ್ದೆ ಮಾಡಲು ಮುಂದಾಗಿದ್ದಾರೆ.ಕಾಂಗ್ರೆಸ್ನವರು ಕ್ರಿಶ್ಚಿಯನ್ನರಿಗೆ ಟೋಪಿ ಹಾಕಿದರು. ಇನ್ನು ಮುಸ್ಲಿಂರಿಗೆ ಯಾವಾಗ ಟೋಪಿ ಹಾಕುತ್ತಾರೋ ಎಂದು ವ್ಯಂಗ್ಯವಾಡಿದರು.</p>.<p>ಜಿಲ್ಲೆಗೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ ಕೊಡುಗೆನೋಡಿ ಜೆಡಿಎಸ್ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಸಮಾಮೇಶ ಆಯೋಜಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>