<p>ಹಾಸನ: ವಿದ್ಯುತ್ ಖಾಸಗೀಕರಣ ಹಾಗೂ ರೈತರ ಕೊಳವೆ ಬಾವಿಗಳಿಗೆ ಮೀಟರ್ ಅಳವಡಿಸುವುದನ್ನು<br />ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ಜಿಲ್ಲಾಧಿಕಾರಿ<br />ಕಚೇರಿ ಎದುರು ಧರಣಿ ನಡೆಸಿದರು.</p>.<p>ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ತಮಟೆ ಬಡಿಯುತ್ತಾ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ, ನೂತನ ಕಾನೂನು ಜಾರಿಗೆ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರವು ವಿದ್ಯುತ್ ಖಾಸಗೀಕರಣಗೊಳಿಸಲು ತೀರ್ಮಾನ ಕೈಗೊಂಡಿರುವುದರಿಂದ ಕೃಷಿ ವಲಯದ<br />ಮೇಲೆ ತೀವ್ರ ದುಷ್ಪರಿಣಾಮ ಬೀರಲಿದೆ. ಅದರಲ್ಲೂ ಮಧ್ಯಮ ವರ್ಗ ಮತ್ತು ಸಾಮಾನ್ಯ ವರ್ಗದ ಜನರಿಗೆ<br />ಖಾಸಗಿ ಕಂಪನಿಗಳು ವಿಧಿಸುವ ದುಬಾರಿ ದರವನ್ನು ನೀಡಲು ಅಸಾಧ್ಯವಾಗುತ್ತದೆ ಎಂದರು.</p>.<p>ಒಂದು ವೇಳೆ ವಿದ್ಯುತ್ ಖಾಸಗೀಕರಣಗೊಂಡರೆ ಮುಂಗಡವಾಗಿ ಹಣ ಪಾವತಿಸಿ ವಿದ್ಯುಚ್ಛಕ್ತಿಯನ್ನು ಬಳಕೆ<br />ಮಾಡಬೇಕಾಗುತ್ತದೆ. ವಿದ್ಯುತ್ ಚ್ಛಕ್ತಿ ಉತ್ಪಾದನೆ ವಿತರಣೆಯನ್ನು ಕಂಪನಿಗಳೇ ನಿರ್ವಹಿಸುತ್ತವೆ. ಕಂಪನಿಗಳು<br />ಲಾಭವಿಲ್ಲದೆ ಕಾರ್ಯಕ್ರಮ ಮಾಡುವುದು ಅಸಾಧ್ಯ. ಈ ಕಾರಣಕ್ಕೆ ಕೃಷಿ ಪಂಪ್ ಸೆಟ್ ಬಳಕೆಗೆ ಸಿಗುವ<br />ವಿದ್ಯುಚ್ಛಕ್ತಿ ಮುಂಬರುವ ದಿನಗಳಲ್ಲಿ ಕನಸಿನ ಮಾತಾಗಿದೆ. ಆದ್ದರಿಂದ ವಿದ್ಯುತ್ ಕ್ಷೇತ್ರ ಸರ್ಕಾರಿ<br />ಸಂಸ್ಥೆಯಾಗಿಯೇ ಉಳಿಯಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾ ಘಟಕದ ಅಧ್ಯಕ್ಷ ಬಾಬು, ಜಿಲ್ಲಾ<br />ಖಜಾಂಚಿ ಅಂಗಡಿ ರಾಜಣ್ಣ, ಉಪಾಧ್ಯಕ್ಷ ಮೀಸೆ ರಾಜಣ್ಣ, ಪುಟ್ಟಸ್ವಾಮಿ, ತಿಮ್ಮಣ್ಣ, ಬಸ್ತಿಹಳ್ಳಿ ಗೌರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ವಿದ್ಯುತ್ ಖಾಸಗೀಕರಣ ಹಾಗೂ ರೈತರ ಕೊಳವೆ ಬಾವಿಗಳಿಗೆ ಮೀಟರ್ ಅಳವಡಿಸುವುದನ್ನು<br />ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ಜಿಲ್ಲಾಧಿಕಾರಿ<br />ಕಚೇರಿ ಎದುರು ಧರಣಿ ನಡೆಸಿದರು.</p>.<p>ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ತಮಟೆ ಬಡಿಯುತ್ತಾ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ, ನೂತನ ಕಾನೂನು ಜಾರಿಗೆ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರವು ವಿದ್ಯುತ್ ಖಾಸಗೀಕರಣಗೊಳಿಸಲು ತೀರ್ಮಾನ ಕೈಗೊಂಡಿರುವುದರಿಂದ ಕೃಷಿ ವಲಯದ<br />ಮೇಲೆ ತೀವ್ರ ದುಷ್ಪರಿಣಾಮ ಬೀರಲಿದೆ. ಅದರಲ್ಲೂ ಮಧ್ಯಮ ವರ್ಗ ಮತ್ತು ಸಾಮಾನ್ಯ ವರ್ಗದ ಜನರಿಗೆ<br />ಖಾಸಗಿ ಕಂಪನಿಗಳು ವಿಧಿಸುವ ದುಬಾರಿ ದರವನ್ನು ನೀಡಲು ಅಸಾಧ್ಯವಾಗುತ್ತದೆ ಎಂದರು.</p>.<p>ಒಂದು ವೇಳೆ ವಿದ್ಯುತ್ ಖಾಸಗೀಕರಣಗೊಂಡರೆ ಮುಂಗಡವಾಗಿ ಹಣ ಪಾವತಿಸಿ ವಿದ್ಯುಚ್ಛಕ್ತಿಯನ್ನು ಬಳಕೆ<br />ಮಾಡಬೇಕಾಗುತ್ತದೆ. ವಿದ್ಯುತ್ ಚ್ಛಕ್ತಿ ಉತ್ಪಾದನೆ ವಿತರಣೆಯನ್ನು ಕಂಪನಿಗಳೇ ನಿರ್ವಹಿಸುತ್ತವೆ. ಕಂಪನಿಗಳು<br />ಲಾಭವಿಲ್ಲದೆ ಕಾರ್ಯಕ್ರಮ ಮಾಡುವುದು ಅಸಾಧ್ಯ. ಈ ಕಾರಣಕ್ಕೆ ಕೃಷಿ ಪಂಪ್ ಸೆಟ್ ಬಳಕೆಗೆ ಸಿಗುವ<br />ವಿದ್ಯುಚ್ಛಕ್ತಿ ಮುಂಬರುವ ದಿನಗಳಲ್ಲಿ ಕನಸಿನ ಮಾತಾಗಿದೆ. ಆದ್ದರಿಂದ ವಿದ್ಯುತ್ ಕ್ಷೇತ್ರ ಸರ್ಕಾರಿ<br />ಸಂಸ್ಥೆಯಾಗಿಯೇ ಉಳಿಯಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾ ಘಟಕದ ಅಧ್ಯಕ್ಷ ಬಾಬು, ಜಿಲ್ಲಾ<br />ಖಜಾಂಚಿ ಅಂಗಡಿ ರಾಜಣ್ಣ, ಉಪಾಧ್ಯಕ್ಷ ಮೀಸೆ ರಾಜಣ್ಣ, ಪುಟ್ಟಸ್ವಾಮಿ, ತಿಮ್ಮಣ್ಣ, ಬಸ್ತಿಹಳ್ಳಿ ಗೌರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>