<p><strong>ಹಾಸನ</strong>: ‘ಕನಿಷ್ಠ ವೇತನವನ್ನು ₹36ಸಾವಿರಕ್ಕೆ ಹೆಚ್ಚಿಸಿ ಪರಿಷ್ಕರಿಸಬೇಕು’ ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಐಟಿಯು 16ನೇ ರಾಜ್ಯ ಸಮ್ಮೇಳನ ಹಕ್ಕೊತ್ತಾಯ ಮಂಡಿಸಿದೆ. </p>.<p>ಇಲ್ಲಿ ಶುಕ್ರವಾರ ನಿರ್ಣಯಗಳನ್ನು ಅಂಗೀಕರಿಸಲಾಯಿತು. </p>.<p>‘ಗುತ್ತಿಗೆ, ಹೊರಗುತ್ತಿಗೆ ನೌಕರರ ಕೆಲಸವನ್ನು ಕಾಯಂಗೊಳಿಸಬೇಕು. ಸರ್ಕಾರವು ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲು ನಿರ್ಣಯಿಸಲಾಗಿದೆ’ ಎಂದು ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಇವು, ರಾಜ್ಯದ ಲಕ್ಷಾಂತರ ಕಾರ್ಮಿಕರ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಬಲ್ಲ ನಿರ್ಣಾಯಕ ನಿರ್ಣಯಗಳಾಗಿವೆ’ ಎಂದರು.</p>.<p>‘ರಾಜ್ಯದ 1.5 ಕೋಟಿ ಕಾರ್ಮಿಕರು ಎದುರಿಸುತ್ತಿರುವ ದೀರ್ಘಕಾಲೀನ ಆರ್ಥಿಕ ಸಂಕಷ್ಟ ಮತ್ತು ಉದ್ಯೋಗ ಅಭದ್ರತೆಯ ಬಿಕ್ಕಟ್ಟುಗಳನ್ನು ಪರಿಹರಿಸುವ ಗುರಿ ಹೊಂದಿರುವ ಪರಿವರ್ತನಾಶೀಲ ನಿರ್ಣಯಗಳ ಮೇಲೆ ಸಮ್ಮೇಳನದ ಕಾರ್ಯಸೂಚಿ ಕೇಂದ್ರೀಕೃತವಾಗಿದೆ. ಈ ಬೇಡಿಕೆಗಳು ರಾಜ್ಯದ ಪ್ರಸ್ತುತ ಕಾರ್ಮಿಕ ನೀತಿಗಳಿಗೆ ಮೂಲಭೂತವಾದ ಸವಾಲನ್ನು ಒಡ್ಡಿವೆ’ ಎಂದರು.</p>.<p>‘ಏಳು ವರ್ಷಗಳಿಂದ ವೇತನ ಪರಿಷ್ಕರಣೆಯಾಗದೇ ಒಂದೂವರೆ ಕೋಟಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆ ಮತ್ತು ಕೆಲಸದ ಒತ್ತಡವನ್ನು ಆಧರಿಸಿ, ಕನಿಷ್ಠ ವೇತನವನ್ನು ₹36ಸಾವಿರಕ್ಕೆ ನಿಗದಿಪಡಿಸಬೇಕು. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಶೇ 50-60ರಷ್ಟು ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರನ್ನು ಶೋಷಣೆಯಿಂದ ಮುಕ್ತಗೊಳಿಸಿ, ವಿಶೇಷ ಕಾನೂನಿನ ಮೂಲಕ ಅವರನ್ನು ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಕನಿಷ್ಠ ವೇತನವನ್ನು ₹36ಸಾವಿರಕ್ಕೆ ಹೆಚ್ಚಿಸಿ ಪರಿಷ್ಕರಿಸಬೇಕು’ ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಐಟಿಯು 16ನೇ ರಾಜ್ಯ ಸಮ್ಮೇಳನ ಹಕ್ಕೊತ್ತಾಯ ಮಂಡಿಸಿದೆ. </p>.<p>ಇಲ್ಲಿ ಶುಕ್ರವಾರ ನಿರ್ಣಯಗಳನ್ನು ಅಂಗೀಕರಿಸಲಾಯಿತು. </p>.<p>‘ಗುತ್ತಿಗೆ, ಹೊರಗುತ್ತಿಗೆ ನೌಕರರ ಕೆಲಸವನ್ನು ಕಾಯಂಗೊಳಿಸಬೇಕು. ಸರ್ಕಾರವು ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲು ನಿರ್ಣಯಿಸಲಾಗಿದೆ’ ಎಂದು ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಇವು, ರಾಜ್ಯದ ಲಕ್ಷಾಂತರ ಕಾರ್ಮಿಕರ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಬಲ್ಲ ನಿರ್ಣಾಯಕ ನಿರ್ಣಯಗಳಾಗಿವೆ’ ಎಂದರು.</p>.<p>‘ರಾಜ್ಯದ 1.5 ಕೋಟಿ ಕಾರ್ಮಿಕರು ಎದುರಿಸುತ್ತಿರುವ ದೀರ್ಘಕಾಲೀನ ಆರ್ಥಿಕ ಸಂಕಷ್ಟ ಮತ್ತು ಉದ್ಯೋಗ ಅಭದ್ರತೆಯ ಬಿಕ್ಕಟ್ಟುಗಳನ್ನು ಪರಿಹರಿಸುವ ಗುರಿ ಹೊಂದಿರುವ ಪರಿವರ್ತನಾಶೀಲ ನಿರ್ಣಯಗಳ ಮೇಲೆ ಸಮ್ಮೇಳನದ ಕಾರ್ಯಸೂಚಿ ಕೇಂದ್ರೀಕೃತವಾಗಿದೆ. ಈ ಬೇಡಿಕೆಗಳು ರಾಜ್ಯದ ಪ್ರಸ್ತುತ ಕಾರ್ಮಿಕ ನೀತಿಗಳಿಗೆ ಮೂಲಭೂತವಾದ ಸವಾಲನ್ನು ಒಡ್ಡಿವೆ’ ಎಂದರು.</p>.<p>‘ಏಳು ವರ್ಷಗಳಿಂದ ವೇತನ ಪರಿಷ್ಕರಣೆಯಾಗದೇ ಒಂದೂವರೆ ಕೋಟಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆ ಮತ್ತು ಕೆಲಸದ ಒತ್ತಡವನ್ನು ಆಧರಿಸಿ, ಕನಿಷ್ಠ ವೇತನವನ್ನು ₹36ಸಾವಿರಕ್ಕೆ ನಿಗದಿಪಡಿಸಬೇಕು. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಶೇ 50-60ರಷ್ಟು ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರನ್ನು ಶೋಷಣೆಯಿಂದ ಮುಕ್ತಗೊಳಿಸಿ, ವಿಶೇಷ ಕಾನೂನಿನ ಮೂಲಕ ಅವರನ್ನು ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>