ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಾಳುಗಳನ್ನು ಆಸ್ಪತ್ರೆಗೆ ‌ಸಾಗಿಸಿ ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ

Last Updated 25 ಜುಲೈ 2022, 4:04 IST
ಅಕ್ಷರ ಗಾತ್ರ

ಹಾಸನ: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಮ್ಮ ಅಂಗರಕ್ಷಕರ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

ಭಾನುವಾರ ಮಧ್ಯಾಹ್ನ ಸಚಿವರು ಹಾಸನಕ್ಕೆ ಬರುತ್ತಿದ್ದಾಗ, ಹೊರವಲಯದ ಹಾಸನ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರವಾಹನಕ್ಕೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿಯೇ ನರಳಾಡುತ್ತಿದ್ದರು.

ಇದನ್ನು ಗಮನಿಸಿದ ಸಚಿವ ಕೆ.ಗೋಪಾಲಯ್ಯ ಕೂಡಲೇ ಕಾರಿನಿಂದ ಇಳಿದು, ತಕ್ಷಣವೇ ಯುವಕರಿಬ್ಬರನ್ನೂ ತಮ್ಮ ಅಂಗರಕ್ಷಕರ ವಾಹನದಲ್ಲಿ ಹಾಸನ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದದು. ಘಟನಾ ಸ್ಥಳದಲ್ಲಿ ನೆರೆದಿದ್ದ ನೂರಾರು ಜನರು ಸಚಿವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವರು ‌ಗಾಯಾಳುಗಳನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT