ಜಲಾಶಯ ಭರ್ತಿಯಾಗಿರುವುದರಿಂದ ಈಗಾಗಲೇ ಹಾಸನ, ಮಂಡ್ಯ, ತುಮಕೂರು, ಮೈಸೂರು ಜಿಲ್ಲೆಗಳಿಗೆ ಹೆಚ್ಚುವರಿ ನೀರನ್ನು ಹರಿಸಲಾಗಿದೆ. ಹಾಸನ ಜಿಲ್ಲೆಯ ಕೆರೆಕಟ್ಟೆಗಳಿಗೆ ನೀರನ್ನು ತುಂಬಿಸಲಾಗಿದ್ದು, ಇದರಿಂದ ರೈತರಲ್ಲಿ ಸಂತಸಮನೆ ಮಾಡಿದೆ ಎಂದರು.
ಜಲಾಶಯದ ಮುಂಭಾಗ ಕೆಆರ್ಎಸ್ ಮಾದರಿಯಲ್ಲಿ ಉದ್ಯಾನ ನಿರ್ಮಾಣ ಕುರಿತು ನೀರಾವರಿ ಹಾಗೂ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಲಾಗುವುದು ಎಂದ ಅವರು, ಕೋವಿಡ್ ನಿಂದಾಗಿ ಎರಡು ವರ್ಷಗಳಿಂದ ಈ ಬಗ್ಗೆ ಪ್ರಸ್ತಾಪ ಆಗಿಲ್ಲ. ಉದ್ಯಾನ ನಿರ್ಮಾಣದಿಂದ ಈ ಭಾಗದಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ವೃದ್ಧಿಗೆ ಸಹಕಾರಿಯಾಗಲಿದೆ ಎಂದರು.