ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಆರೋಗ್ಯ ವಿಚಾರಿಸಿ, ಆಸ್ಪತ್ರೆಗೆ ದಾಖಲಿಸುವ ಮೂಲಕ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.
ನಗರದ ಹೊರವಲಯದ ಬುವನಹಳ್ಳಿ ಕ್ರಾಸ್ ಬಳಿ ಗುರುವಾರ ಹೋಂಡಾ ಆ್ಯಕ್ಟಿವಾ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ಅಪಘಾತ ಸಂಭವಿಸಿ, ಸಣ್ಣಪುಟ್ಟ ಗಾಯದೊಂದಿಗೆ ವ್ಯಕ್ತಿ ನರಳಾಡುತ್ತಿದ್ದರು.
ಹಾಸನ ಪ್ರವಾಸ ಕೈಗೊಂಡಿಸದ ಸಚಿವರು ಕಾರಿನಲ್ಲಿ ಬರುತ್ತಿದ್ದಾಗ ಬೈಕ್ ಸವಾರ ಬಿದ್ದಿರುವುದನ್ನು ನೋಡಿ, ತಮ್ಮ ಕಾರನ್ನು ನಿಲ್ಲಿಸಿದ್ದಾರೆ. ನಂತರ ಅವರನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.