ಪ್ರತಿನಿತ್ಯ ಅರ್ಚಕರು ಪೂಜೆ ನೆರವೇರಿಸಿ ಮನೆಗೆ ಹೋಗುತ್ತಾರೆ. ನಂತರ ಕೇಂದ್ರ ಪುರಾತತ್ವಸರ್ವೇಕ್ಷಣಾ ಇಲಾಖೆಯವರುದೇವಾಲಯದ ರಕ್ಷಣೆ ನೋಡಿಕೊಳ್ಳುತ್ತಾರೆ. ಆದರೆ ರಾತ್ರಿ ವೇಳೆ ಕಾವಲುಗಾರರನ್ನು ನೇಮಕ ಮಾಡದೇ ಇರುವುದು ಘಟನೆಗೆ ಕಾರಣ ಎನ್ನಲಾಗಿದೆ.
‘ರಜೆ ಹಾಕಿ ಊರಿಗೆ ಹೋದ ಸಮಯದಲ್ಲಿ ಘಟನೆ ನಡೆದಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಹಾಗೂ ಇಲಾಖೆಯಿಂದ ಈ ಕುರಿತು ತನಿಖೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಸಹಾಯಕ ಸ್ಮಾರಕ ಸಂರಕ್ಷಣಾಧಿಕಾರಿ ಕಿಶೋರ್ ರೆಡ್ಡಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.