ಇದೇ ಸಂದರ್ಭದಲ್ಲಿ ₹ 15 ಲಕ್ಷ ವೆಚ್ಚದಲ್ಲಿ ಹೊನ್ನಾಳಮ್ಮ ಕಪ್ಪಲು ರಸ್ತೆ ಅಭಿವೃದ್ಧಿ, ₹ 55 ಲಕ್ಷ ವೆಚ್ಚದಲ್ಲಿ ಗೊರಗುಂಡಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ₹20 ಲಕ್ಷ ವೆಚ್ಚದಲ್ಲಿ ದಾಸೇಗೌಡನ ಕೊಪ್ಪಲಿನ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು. ನಂತರ ₹20 ಲಕ್ಷ ವೆಚ್ಚದಲ್ಲಿ ಹಳ್ಳಿಮೈಸೂರಿನ ಕೆಲವು ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನಡೆಸಿದರು.
ಈ ಎಲ್ಲಾ ಕಾಮಗಾರಿಗಳು ನಿಗದಿತ ಸಮಯದಲ್ಲಿ ಮುಗಿಯಬೇಕು. ಕೆಲಸ ಉತ್ತಮ ಗುಣಮಟ್ಟದಲ್ಲಿ ನಡೆಯುವಂತೆ ನೋಡಿಕೊಳ್ಳಿ ಎಂದು ನೀರಾವರಿ ಇಲಾಖೆಯ ಎಇಇ ವಿಜಯಕುಮಾರ್, ಎಂಜಿನಿಯರ್ ಮಂಜು ಪ್ರಸಾದ್ಗೆ ಸೂಚಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಶ್ವನಾಥ್, ಮಾಜಿ ಅಧ್ಯಕ್ಷ ಬಾಲಗಂಗಾಧರ್, ಮತ್ತೊಬ್ಬ ಮಾಜಿ ಅಧ್ಯಕ್ಷ ಮಂಗಳವಾಡಿ ಬಾಬು ಭಾಗವಹಿಸಿದ್ದರು.