ರಾಜಣ್ಣ ಜಿಲ್ಲಾ ಮಂತ್ರಿ: ಜಿಲ್ಲಾ ಉಸ್ತುವಾರಿ ಸಚಿವರು ಹಾಸನ ಜಿಲ್ಲೆ ಕಡೆಗಣಿಸಿರುವ ವಿಚಾರವಾಗಿ ಮಾತನಾಡಿದ ಮಂಜು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಕೇವಲ ಒಂದು ತಾಲ್ಲೂಕಿನ ಮಂತ್ರಿಯಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಎಂದು ಹೇಳಲು ಬಯಸುತ್ತೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲ ತಾಲ್ಲೂಕಿನ ಜನಪ್ರತಿನಿಧಿಗಳು, ಶಾಸಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.