ಹಾಸನದಲ್ಲಿ ವಿಮಾನ ನಿಲ್ದಾಣ ಯೋಜನೆ ಐದು ದಶಕಗಳಿಂದ ನನೆಗುದಿಗೆ ಬಿದ್ದಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಯೋಜನೆಗೆ ಅನುಮೋದನೆನೀಡಿದ್ದರು. ಆದರೆ, 2008ರಲ್ಲಿ ಯಡಿಯೂರಪ್ಪ ಅವರೇ ಈ ಕಾಮಗಾರಿಗೆ ತಡೆ ಹಿಡಿದರು.ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ ₹144 ಕೋಟಿ ವೆಚ್ಚದ ಕ್ರಿಯಾ ಯೋಜನೆರೂಪಿಸಿ, ₹84 ಲಕ್ಷ ವೆಚ್ಚದಲ್ಲಿ ನೀಲ ನಕ್ಷೆ ಸಿದ್ದಪಡಿಸಲಾಗಿದೆ. ಈಗ ಅನುದಾನ ತಡೆ ಹಿಡಿಯಲಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಎರಡು ರಾಷ್ಟ್ರೀಯ ಪಕ್ಷಗಳು ಕಂಟಕವಾಗಿವೆ ಎಂದು ದೂರಿದರು.