<p><strong>ಅರಸೀಕೆರೆ</strong>: ‘ವಿಧಾನಸಭಾ ಕ್ಷೇತ್ರದಲ್ಲಿ ಪೂರ್ಣ ನೀರಾವರಿ ಒದಗಿಸಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದೇ ನನ್ನ ಆದ್ಯ ಕರ್ತವ್ಯ’ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p> ಗೀಜಿಹಳ್ಳಿಯ ಪಂಚಾಯಿತಿಯ ಬೋರನಕೊಪ್ಪಲು ಗ್ರಾಮದಿಂದ ಮಣ್ಣು ಮಾಕನಹಳ್ಳಿ ವರೆಗೆ ₹ 1 ಕೋಟಿ ವೆಚ್ಚದ ಡಾಂಬರ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ರೈತರ ಏಳಿಗೆಗೆ ನೀರು ಹಾಗೂ ವಿದ್ಯುತ್ ಒದಗಿಸಲಾಗುವುದು. ಎತ್ತಿನ ಹೊಳೆ ಯೋಜನೆಗೆ ₹200 ಕೋಟಿ ಅನುದಾನಕ್ಕಾಗಿ ಸರ್ಕಾರದ ಗಮನ ಸೆಳೆದು ತರಲಾಗಿದೆ’ ಎಂದರು.</p>.<p> ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ದರ್ಶನಕ್ಕಾಗಿ ಬೋರನಕೊಪ್ಪಲು, ಹಾರನಹಳ್ಳಿ, ಮುರುಂಡಿ , ಸಂಕೋಡ್ನಹಳ್ಳಿ ಸೇರಿದಂತೆ ಎಲ್ಲ ಕಡೆಯಿಂದಲೂ ಸುಗಮ ಸಂಚಾರಕ್ಕಾಗಿ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.</p>.<p>ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಮಾತನಾಡಿ, ಕ್ಷೇತ್ರದ ಶಿಕ್ಷಣದ ಅಭಿವೃದ್ದಿಗೆ ಶಾಸಕರ ಶ್ರಮ ಹೇಳತೀರದು. ಬೋರನಕೊಪ್ಪಲು ಗ್ರಾಮದ ಅಭಿವೃದ್ಧಿ ಕೆಲಸಗಳಿಗೆ ಶಾಸಕರು ಮುಂದಾಗಿದ್ದಾರೆ ಎಂದರು.</p>.<p>ಮುಖಂಡರಾದ ಯಾಳವಾರೆ ಕೇಶವಣ್ಣ. ಬೈರೇಶ್, ಧರ್ಮಣ್ಣ, ನಾಗರಾಜ್, ರವಿ, ಈರಣ್ಣ,ಕಾಂತರಾಜ್, ಸ್ವಾಮಣ್ಣ, ಸಹ್ಯಾದ್ರಿ ದೇವರಾಜು, ಗುತ್ತಿಗೆದಾರ ಜ್ಞಾನೇಶ್, ಬೋರನಕೊಪ್ಪಲು ಶಿವಲಿಂಗಣ್ಣ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ</strong>: ‘ವಿಧಾನಸಭಾ ಕ್ಷೇತ್ರದಲ್ಲಿ ಪೂರ್ಣ ನೀರಾವರಿ ಒದಗಿಸಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದೇ ನನ್ನ ಆದ್ಯ ಕರ್ತವ್ಯ’ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p> ಗೀಜಿಹಳ್ಳಿಯ ಪಂಚಾಯಿತಿಯ ಬೋರನಕೊಪ್ಪಲು ಗ್ರಾಮದಿಂದ ಮಣ್ಣು ಮಾಕನಹಳ್ಳಿ ವರೆಗೆ ₹ 1 ಕೋಟಿ ವೆಚ್ಚದ ಡಾಂಬರ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ರೈತರ ಏಳಿಗೆಗೆ ನೀರು ಹಾಗೂ ವಿದ್ಯುತ್ ಒದಗಿಸಲಾಗುವುದು. ಎತ್ತಿನ ಹೊಳೆ ಯೋಜನೆಗೆ ₹200 ಕೋಟಿ ಅನುದಾನಕ್ಕಾಗಿ ಸರ್ಕಾರದ ಗಮನ ಸೆಳೆದು ತರಲಾಗಿದೆ’ ಎಂದರು.</p>.<p> ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ದರ್ಶನಕ್ಕಾಗಿ ಬೋರನಕೊಪ್ಪಲು, ಹಾರನಹಳ್ಳಿ, ಮುರುಂಡಿ , ಸಂಕೋಡ್ನಹಳ್ಳಿ ಸೇರಿದಂತೆ ಎಲ್ಲ ಕಡೆಯಿಂದಲೂ ಸುಗಮ ಸಂಚಾರಕ್ಕಾಗಿ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.</p>.<p>ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಮಾತನಾಡಿ, ಕ್ಷೇತ್ರದ ಶಿಕ್ಷಣದ ಅಭಿವೃದ್ದಿಗೆ ಶಾಸಕರ ಶ್ರಮ ಹೇಳತೀರದು. ಬೋರನಕೊಪ್ಪಲು ಗ್ರಾಮದ ಅಭಿವೃದ್ಧಿ ಕೆಲಸಗಳಿಗೆ ಶಾಸಕರು ಮುಂದಾಗಿದ್ದಾರೆ ಎಂದರು.</p>.<p>ಮುಖಂಡರಾದ ಯಾಳವಾರೆ ಕೇಶವಣ್ಣ. ಬೈರೇಶ್, ಧರ್ಮಣ್ಣ, ನಾಗರಾಜ್, ರವಿ, ಈರಣ್ಣ,ಕಾಂತರಾಜ್, ಸ್ವಾಮಣ್ಣ, ಸಹ್ಯಾದ್ರಿ ದೇವರಾಜು, ಗುತ್ತಿಗೆದಾರ ಜ್ಞಾನೇಶ್, ಬೋರನಕೊಪ್ಪಲು ಶಿವಲಿಂಗಣ್ಣ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>