ತಾಲ್ಲೂಕಿನಲ್ಲಿ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ತಮ್ಮ ಪುತ್ರಡ್ರಗ್ಸ್ ತೆಗೆದುಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಅವನನ್ನು ಉಳಿಸಿಕೊಡುವಂತೆ ವಿಧಾನಸಭೆಯಲ್ಲಿ ಶಾಸಕರೊಬ್ಬರು ಅಂಗಲಾಚಿ ಬೇಡಿಕೊಂಡಿದ್ದರು. ಆದರೆ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಲಿಲ್ಲ. ಈಗಲಾದರೂ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡು ಸಂಪೂರ್ಣವಾಗಿ ನಿಯಂತ್ರಿಸಬೇಕು’ ಎಂದು ಒತ್ತಾಯಿಸಿದರು.