ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಯವರ ಸರ್ಕಾರ ಕಳಂಕ ರಹಿತ: ಕೆ. ಎಸ್. ಮಂಜೇಗೌಡ.

Published 18 ಏಪ್ರಿಲ್ 2024, 15:03 IST
Last Updated 18 ಏಪ್ರಿಲ್ 2024, 15:03 IST
ಅಕ್ಷರ ಗಾತ್ರ

ಆಲೂರು: ಕಳಂಕ ರಹಿತ ಆಡಳಿತ ನೀಡಿ, ಪ್ರಪಂಚದಲ್ಲಿ ದೇಶದ ಗೌರವ ಹೆಚ್ಚುವಂತೆ ಎರಡು ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜಿಪಿ ಸರ್ಕಾರ ನೇತೃತ್ವದ ಸರ್ಕಾರ ನಡೆಸಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್. ಮಂಜೇಗೌಡ ತಿಳಿಸಿದರು.

ಮೂರನೇ ಬಾರಿ ಅವರನ್ನು ಪ್ರಧಾನಮಂತ್ರಿ ಮಾಡುವ ಸಲುವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ  ರಾಜ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು ರಾಜ್ಯದ 28 ಕ್ಷೇತ್ರಗಳನ್ನೂ ಗೆಲ್ಲುವ ಮೂಲಕ ಪ್ರಧಾನ ಮಂತ್ರಿಗೆ ಗೌರವ ಸಮರ್ಪಿಸೋಣ ಎಂದರು.

ಆಲೂರು ಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಬಿಜೆಪಿ-ಜೆಡಿಎಸ್ ಜಂಟಿ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಹಾಗೂ ಕೃಷಿಗೆ ಹೆಚ್ಚು ಆದ್ಯತೆಯಲ್ಲಿ ಅನುದಾನ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ  ಸಂಸದರಾಗಿ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ತಂದು ಹಾಸನ ಜಿಲ್ಲೆಯ ಅಭಿದ್ಧಿಗೆ ಶ್ರಮಿಸಿದ್ದಾರೆ. ಪ್ರಜ್ವಲ್ ರೇವಣ್ಣ ರವರ ಗೆಲುವು ಶತಸಿದ್ಧ ಎಂದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪೂವಯ್ಯಮಾತನಾಡಿ, ಕೆಲವು ಮುಖಂಡರು ಜಿಲ್ಲೆಯಾದ್ಯಂತ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಮತದಾರರು ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡಬಾರದು ಎಂದರು.  ಬಿಜೆಪಿ ತಾಲ್ಲೂಕು ಅಧ್ಯಕ್ಷೆ ಉಮಾ, ಜೆಡಿಎಸ್ ಮುಖಂಡ ಪಿ.ಎಲ್.ಲಿಂಗರಾಜು, ಹುಲ್ಲಳ್ಳಿ ನಾಗರಾಜ್, ಕದಾಳು ಲೋಕೇಶ್, ಬಿಜೆಪಿ ಮುಖಂಡರಾದ ಡಾ.ಜಯರಾಜ್, ಕಟ್ಟೆಗದ್ದೆ ನಾಗರಾಜು, ಭರಣ್, ನಟರಾಜ್ ಸೊಂಪುರ, ಲೋಹಿತ್, ಮಲ್ಲಿಕಾರ್ಜುನ್, ಜೈಪಾಲ್  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT