<p><strong>ಹಾಸನ: </strong>ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಳಿಸಿದೆ. ಎರಡು ದಿನಗಳಿಂದ ವರುಣನ ಅಬ್ಬರಕ್ಕೆ ಜನರು ತತ್ತರಿಸಿದ್ದಾರೆ.</p>.<p>ಮಳೆಯ ನಡುವೆಯೇ ಜನರು ವ್ಯಾಪಾರ ವಹಿವಾಟು ನಡೆಸಿದರು. ಕೆಲವರು ಮನೆಯಿಂದ ಹೊರಗೆ ಬರಲಿಲ್ಲ. ಮಳೆಯನ್ನು ಲೆಕ್ಕಿಸದೆ ಬಹಳಷ್ಟು ರೈತರು ಜಮೀನುಗಳತ್ತ ಮುಖ ಮಾಡಿದ್ದಾರೆ. ನಗರದ ಬಿ.ಎಂ ರಸ್ತೆ, ಹಳೆ ಮುನ್ಸಿಪಲ್ ಕಚೇರಿರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ಸಕಲೇಶಪುರ ತಾಲ್ಲೂಕಿನಲ್ಲಿ ಭಾರೀ ಗಾಳಿ ಹಾಗೂ ಮಳೆಗೆ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೆತ್ತೂರು ಹೋಬಳಿಯಾದಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಳೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.<br /><br />ಜಲಾನಯನ ಭಾಗ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ<br />ಹೇಮಾವತಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಪ್ರಸ್ತುತ 8 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಸಕಲೇಶಪುರ ತಾಲ್ಲೂಕಿನ ತೊರೆ, ಹಳ್ಳಗಳ್ಳಲ್ಲಿ ನೀರಿನ ಹರಿವು ಹೆಚ್ಚಿದೆ.</p>.<p>ಅರಕಲಗೂಡು ತಾಲ್ಲೂಕಿನ ಯಗಟಿ ಗ್ರಾಮದ ನಿಂಗಾಜಮ್ಮ ಅವರ ಮನೆಯ ಗೋಡೆ ಕುಸಿದು ಬಿದ್ದಿದೆ. ಘಟನೆ ನಡೆದ ವೇಳೆ ನಾಲ್ಕು ಜನರು ವಾಸವಾಗಿದ್ದರು. ಯಾರಿಗೂ ಪ್ರಾಣಾಪಾಯವಾಗಿಲ್ಲ.</p>.<p>ಕಾವೇರಿ ನದಿ ಪಾತ್ರದಲ್ಲಿ ನಾಲೆಗೆ ನೀರು ಹರಿಸಲಾಗಿದ್ದು, ಭತ್ತದ ಅಗೆ ಹಾಕುತ್ತಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಟ್ಟೇಪುರ ನಾಲಾ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ತುಂಬಾಕು ಬೆಳೆ ಬೆಳೆಯಲಾಗಿದ್ದು, ಕಟಾವು ಕಾರ್ಯ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಳಿಸಿದೆ. ಎರಡು ದಿನಗಳಿಂದ ವರುಣನ ಅಬ್ಬರಕ್ಕೆ ಜನರು ತತ್ತರಿಸಿದ್ದಾರೆ.</p>.<p>ಮಳೆಯ ನಡುವೆಯೇ ಜನರು ವ್ಯಾಪಾರ ವಹಿವಾಟು ನಡೆಸಿದರು. ಕೆಲವರು ಮನೆಯಿಂದ ಹೊರಗೆ ಬರಲಿಲ್ಲ. ಮಳೆಯನ್ನು ಲೆಕ್ಕಿಸದೆ ಬಹಳಷ್ಟು ರೈತರು ಜಮೀನುಗಳತ್ತ ಮುಖ ಮಾಡಿದ್ದಾರೆ. ನಗರದ ಬಿ.ಎಂ ರಸ್ತೆ, ಹಳೆ ಮುನ್ಸಿಪಲ್ ಕಚೇರಿರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ಸಕಲೇಶಪುರ ತಾಲ್ಲೂಕಿನಲ್ಲಿ ಭಾರೀ ಗಾಳಿ ಹಾಗೂ ಮಳೆಗೆ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೆತ್ತೂರು ಹೋಬಳಿಯಾದಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಳೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.<br /><br />ಜಲಾನಯನ ಭಾಗ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ<br />ಹೇಮಾವತಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಪ್ರಸ್ತುತ 8 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಸಕಲೇಶಪುರ ತಾಲ್ಲೂಕಿನ ತೊರೆ, ಹಳ್ಳಗಳ್ಳಲ್ಲಿ ನೀರಿನ ಹರಿವು ಹೆಚ್ಚಿದೆ.</p>.<p>ಅರಕಲಗೂಡು ತಾಲ್ಲೂಕಿನ ಯಗಟಿ ಗ್ರಾಮದ ನಿಂಗಾಜಮ್ಮ ಅವರ ಮನೆಯ ಗೋಡೆ ಕುಸಿದು ಬಿದ್ದಿದೆ. ಘಟನೆ ನಡೆದ ವೇಳೆ ನಾಲ್ಕು ಜನರು ವಾಸವಾಗಿದ್ದರು. ಯಾರಿಗೂ ಪ್ರಾಣಾಪಾಯವಾಗಿಲ್ಲ.</p>.<p>ಕಾವೇರಿ ನದಿ ಪಾತ್ರದಲ್ಲಿ ನಾಲೆಗೆ ನೀರು ಹರಿಸಲಾಗಿದ್ದು, ಭತ್ತದ ಅಗೆ ಹಾಕುತ್ತಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಟ್ಟೇಪುರ ನಾಲಾ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ತುಂಬಾಕು ಬೆಳೆ ಬೆಳೆಯಲಾಗಿದ್ದು, ಕಟಾವು ಕಾರ್ಯ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>