<p><strong>ಹಾಸನ</strong>: ನಿತ್ಯ ಬಸ್ನಲ್ಲಿ ಓಡಾಡುವ ನೌಕರರು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಬಸ್ ಪಾಸ್ ನೀಡುವಲ್ಲಿ ವಿಳಂಬ ಮಾಡಲಾಗುತ್ತಿದ್ದು, ಹಣ ಕೊಟ್ಟು ಪ್ರಯಾಣಿಸುವಂತಾಗಿದೆ ಎಂದು ಪ್ರಯಾಣಿಕರು ದೂರುತ್ತಿದ್ದಾರೆ.</p>.<p>2–3 ತಿಂಗಳಿನಿಂದ ಮಾಸಿಕ ಬಸ್ ಪಾಸ್ ವಿತರಣೆ ವಿಳಂಬವಾಗುತ್ತಿದೆ. ಚನ್ನರಾಯಪಟ್ಟಣ ಸೇರಿದಂತೆ ಇತರೆ ತಾಲ್ಲೂಕುಗಳಿಗೂ ಪಾಸ್ ವಿತರಣೆಗೆ ವಿಳಂಬ ಮಾಡಲಾಗುತ್ತಿದೆ.</p>.<p>ಇದರಿಂದ ನಿತ್ಯ ತಾಲ್ಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಹಾಗೂ ಇತರೆ ತಾಲ್ಲೂಕುಗಳಿಗೆ ಪ್ರಯಾಣ ಮಾಡುವ ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ತೊಂದರೆ ಉಂಟಾಗಿದೆ.</p>.<p>ಪ್ರತಿ ತಿಂಗಳು ಮಾಸಿಕ ಪಾಸ್ ಪಡೆಯಲು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬರುತ್ತಿದ್ದು, ಪಾಸ್ಗಳು ಖಾಲಿಯಾಗಿವೆ ಎಂದು ಪಾಸ್ ವಿತರಣಾ ಕೇಂದ್ರದ ಸಿಬ್ಬಂದಿ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಸಾರಿಗೆ ನಿಗಮದಿಂದಲೇ ಪಾಸ್ಗಳು ಸಮರ್ಪಕವಾಗಿ ವಿತರಣೆಯಾಗಿಲ್ಲ. ಆದ್ದರಿಂದ ವಿಳಂಬವಾಗುತ್ತಿದೆ ಎಂದು ಉತ್ತರ ನೀಡುವ ಇಲ್ಲಿನ ಸಿಬ್ಬಂದಿ, ಸಮಯಕ್ಕೆ ಸರಿಯಾಗಿ ಪಾಸ್ ವಿತರಣೆಯಲ್ಲಿ ಲೋಪ ಎಸಗಿದ್ದಾರೆ’ ಎಂದು ಖಾಸಗಿ ನೌಕರ ಲೋಕೇಶ್ ದೂರಿದ್ದಾರೆ.</p>.<p>ಮುಂದಿನ ದಿನಗಳಲ್ಲಿ ಸಮಯಕ್ಕೆ ಸರಿಯಾಗಿ ಮಾಸಿಕ ಪಾಸ್ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆಗೆ ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಿತ್ಯ ಬಸ್ನಲ್ಲಿ ಓಡಾಡುವ ನೌಕರರು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಬಸ್ ಪಾಸ್ ನೀಡುವಲ್ಲಿ ವಿಳಂಬ ಮಾಡಲಾಗುತ್ತಿದ್ದು, ಹಣ ಕೊಟ್ಟು ಪ್ರಯಾಣಿಸುವಂತಾಗಿದೆ ಎಂದು ಪ್ರಯಾಣಿಕರು ದೂರುತ್ತಿದ್ದಾರೆ.</p>.<p>2–3 ತಿಂಗಳಿನಿಂದ ಮಾಸಿಕ ಬಸ್ ಪಾಸ್ ವಿತರಣೆ ವಿಳಂಬವಾಗುತ್ತಿದೆ. ಚನ್ನರಾಯಪಟ್ಟಣ ಸೇರಿದಂತೆ ಇತರೆ ತಾಲ್ಲೂಕುಗಳಿಗೂ ಪಾಸ್ ವಿತರಣೆಗೆ ವಿಳಂಬ ಮಾಡಲಾಗುತ್ತಿದೆ.</p>.<p>ಇದರಿಂದ ನಿತ್ಯ ತಾಲ್ಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಹಾಗೂ ಇತರೆ ತಾಲ್ಲೂಕುಗಳಿಗೆ ಪ್ರಯಾಣ ಮಾಡುವ ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ತೊಂದರೆ ಉಂಟಾಗಿದೆ.</p>.<p>ಪ್ರತಿ ತಿಂಗಳು ಮಾಸಿಕ ಪಾಸ್ ಪಡೆಯಲು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬರುತ್ತಿದ್ದು, ಪಾಸ್ಗಳು ಖಾಲಿಯಾಗಿವೆ ಎಂದು ಪಾಸ್ ವಿತರಣಾ ಕೇಂದ್ರದ ಸಿಬ್ಬಂದಿ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಸಾರಿಗೆ ನಿಗಮದಿಂದಲೇ ಪಾಸ್ಗಳು ಸಮರ್ಪಕವಾಗಿ ವಿತರಣೆಯಾಗಿಲ್ಲ. ಆದ್ದರಿಂದ ವಿಳಂಬವಾಗುತ್ತಿದೆ ಎಂದು ಉತ್ತರ ನೀಡುವ ಇಲ್ಲಿನ ಸಿಬ್ಬಂದಿ, ಸಮಯಕ್ಕೆ ಸರಿಯಾಗಿ ಪಾಸ್ ವಿತರಣೆಯಲ್ಲಿ ಲೋಪ ಎಸಗಿದ್ದಾರೆ’ ಎಂದು ಖಾಸಗಿ ನೌಕರ ಲೋಕೇಶ್ ದೂರಿದ್ದಾರೆ.</p>.<p>ಮುಂದಿನ ದಿನಗಳಲ್ಲಿ ಸಮಯಕ್ಕೆ ಸರಿಯಾಗಿ ಮಾಸಿಕ ಪಾಸ್ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆಗೆ ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>