ನಗರದ ನಿವೃತ್ತ ನೌಕರರ ಸಂಘದ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಅಂಗವಿಕಲರು ವೈಫಲ್ಯತೆ ಮರೆತು ಸಾಧನೆ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್ ಮಾತನಾಡಿ, ಅಂಗವಿಕಲತೆ ಎನ್ನುವುದು
ದೌರ್ಬಲ್ಯವಲ್ಲ. ಪ್ರತಿಯೊಂದನ್ನೂ ಮಾಡುತ್ತೇನೆ ಎನ್ನುವ ಛಲ ಹಾಗೂ ಆತ್ಮವಿಶ್ವಾಸ ಇರಬೇಕು. ಅಂಗವಿಕಲರ
ಶ್ರೇಯೋಭಿವೃದ್ಧಿಗೆ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಯಾರ ಮೇಲೂ ಅವಲಂಬಿತರಾಗದೆ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.