<p>ಹಾಸನ: ‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯದಾದ್ಯಂತ ಲೋಕ<br />ಅದಾಲತ್ ನಡೆಸುತ್ತಿದ್ದು, ಜಿಲ್ಲೆಯಲ್ಲಿ ಹತ್ತುಸಾವಿರಕ್ಕೂ ಅಧಿಕ ಪ್ರಕರಣಗಳು ಒಂದೇ ದಿನ<br />ಇತ್ಯರ್ಥವಾಗಿವೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸೋಮಶೇಖರ್ ಹೇಳಿದರು.</p>.<p>ಕಡಿಮೆ ಖರ್ಚಿನಲ್ಲಿ ತ್ವರಿತವಾಗಿ ನ್ಯಾಯ ವಿಲೇವಾರಿಗೆ ಲೋಕ ಅದಾಲತ್ ಅತ್ಯಂತ ಸಹಕಾರಿಯಾಗಿದ್ದು,<br />ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಸದುಪಯೋಗ ಪಡೆದುಕೊಳ್ಳಬೇಕು. ಅದಾಲತ್ನಲ್ಲಿ ಹಣ ಹಾಗೂ<br />ಸಮಯದ ಉಳಿತಾಯವಾಗುವುದರ ಜೊತೆಗೆ ಪ್ರಕರಣಗಳು ಸೌಹಾರ್ದಯುತವಾಗಿ ಮುಕ್ತಾಯಗೊಳ್ಳುತ್ತವೆ. ಇದರಿಂದ ನ್ಯಾಯಾಲಯದಲ್ಲಿ ಇತರೆ ಪ್ರಕರಣಗಳ ವಿಚಾರಗಳನ್ನು ಚುರುಕುಗೊಳಿಸಲು ಸಹಾಯವಾಗುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯಲ್ಲಿ 79,435 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ 5,659 ಸಿವಿಲ್, 1,62,79 ಕ್ರಿಮಿನಲ್ ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 10,098ಪ್ರಕರಣಗಳು ಇತ್ಯರ್ಥವಾಗಿವೆ. 8978 ಕ್ರಿಮಿನಲ್ ಪ್ರಕರಣ , ಚೆಕ್ ಬೌನ್ಸ್ 127, ಎಂವಿಸಿ 265 ಹಾಗೂ ಸಿವಿಲ್ ಪ್ರಕರಣಗಳು ಇತ್ಯರ್ಥವಾಗಿದೆ. ಅದಾಲತ್ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರವು ದೊಡ್ಡದಾಗಿದ್ದು, ಈ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಟ್ಟದಲ್ಲಿ ಅರಿವು ಮೂಡಿಸಬೇಕಿದೆ ಎಂದು ಅವರು ಹೇಳಿದರು.</p>.<p>ಕಾನೂನಿನ ಇತಿಮಿತಿಯೊಳಗೆ ಸಾಧ್ಯವಾಗುವ ಪ್ರಕರಣಗಳನ್ನು ಎರಡೂ ಕಡೆಯಿಂದ ಕಕ್ಷಿದಾರರು,<br />ವಕೀಲರ ಸಮ್ಮುಖದಲ್ಲಿ ಇತ್ಯರ್ಥಪಡಿಸಲಾಗುತ್ತದೆ. ಇದಕ್ಕೆ ವಕೀಲರು ಸಂಪೂರ್ಣ ಸಹಕಾರ<br />ನೀಡುತ್ತಿದ್ದಾರೆ ಎಂದು ನುಡಿದರು.</p>.<p>ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ಮಾತನಾಡಿ, ‘ಅದಾಲತ್ನಲ್ಲಿ 22 ವರ್ಷ ಹಳೆಯದಾದ ಸಿವಿಲ್ ಪ್ರಕರಣ ಆಲೂರು ನ್ಯಾಯಾಲಯದಲ್ಲಿ ಬಗೆಹರಿದಿದೆ. ಅದೇ ರೀತಿ ಹಾಸನದಲ್ಲಿ ಕೇವಲ ಒಂದು ತಿಂಗಳ ಹಿಂದೆ ದಾಖಲಾಗಿದ್ದ ವ್ಯಾಜ್ಯವೊಂದು ಇತ್ಯರ್ಥವಾಗಿದೆ. ಇದುಅದಾಲತ್ನ ಶಕ್ತಿಯಾಗಿದೆ’ ಎಂದರು.</p>.<p>ಸಿವಿಲ್, ಕ್ರಿಮಿನಲ್ ಪ್ರಕರಣ, ಚೆಕ್ ಬೌನ್ಸ್ , ಬ್ಯಾಂಕ್ ವಸೂಲಾತಿ, ಮೋಟಾರು ವಾಹನ, ಕೌಟುಂಬಿಕ,<br />ಕಂದಾಯ, ಜನನ ಮತ್ತು ಮರಣ ನೋಂದಣಿ, ಜೀವನಾಂಶ ಪ್ರಕರಣ ಹಾಗೂ ಇನ್ನಿತರ ಲಘು ಕ್ರಿಮಿನಲ್<br />ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣ<br />ಇತ್ಯರ್ಥ ಪಡಿಸಲಾಗಿದೆ. ಅದಾಲತ್ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತಿದ್ದು, ಕಳೆದ<br />ಮಾರ್ಚ್ನಲ್ಲಿ 4,261 ಪ್ರಕರಣ ಇತ್ಯರ್ಥಪಡಿಸಲಾಗಿತ್ತು ಎಂದು ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಬಿ.ಕೆ ರವಿಕಾಂತ್,<br />ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಪಿ ಶೇಖರ್. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕಾರ್ಲೆ<br />ಮೊಗಣ್ಣಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯದಾದ್ಯಂತ ಲೋಕ<br />ಅದಾಲತ್ ನಡೆಸುತ್ತಿದ್ದು, ಜಿಲ್ಲೆಯಲ್ಲಿ ಹತ್ತುಸಾವಿರಕ್ಕೂ ಅಧಿಕ ಪ್ರಕರಣಗಳು ಒಂದೇ ದಿನ<br />ಇತ್ಯರ್ಥವಾಗಿವೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸೋಮಶೇಖರ್ ಹೇಳಿದರು.</p>.<p>ಕಡಿಮೆ ಖರ್ಚಿನಲ್ಲಿ ತ್ವರಿತವಾಗಿ ನ್ಯಾಯ ವಿಲೇವಾರಿಗೆ ಲೋಕ ಅದಾಲತ್ ಅತ್ಯಂತ ಸಹಕಾರಿಯಾಗಿದ್ದು,<br />ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಸದುಪಯೋಗ ಪಡೆದುಕೊಳ್ಳಬೇಕು. ಅದಾಲತ್ನಲ್ಲಿ ಹಣ ಹಾಗೂ<br />ಸಮಯದ ಉಳಿತಾಯವಾಗುವುದರ ಜೊತೆಗೆ ಪ್ರಕರಣಗಳು ಸೌಹಾರ್ದಯುತವಾಗಿ ಮುಕ್ತಾಯಗೊಳ್ಳುತ್ತವೆ. ಇದರಿಂದ ನ್ಯಾಯಾಲಯದಲ್ಲಿ ಇತರೆ ಪ್ರಕರಣಗಳ ವಿಚಾರಗಳನ್ನು ಚುರುಕುಗೊಳಿಸಲು ಸಹಾಯವಾಗುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯಲ್ಲಿ 79,435 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ 5,659 ಸಿವಿಲ್, 1,62,79 ಕ್ರಿಮಿನಲ್ ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 10,098ಪ್ರಕರಣಗಳು ಇತ್ಯರ್ಥವಾಗಿವೆ. 8978 ಕ್ರಿಮಿನಲ್ ಪ್ರಕರಣ , ಚೆಕ್ ಬೌನ್ಸ್ 127, ಎಂವಿಸಿ 265 ಹಾಗೂ ಸಿವಿಲ್ ಪ್ರಕರಣಗಳು ಇತ್ಯರ್ಥವಾಗಿದೆ. ಅದಾಲತ್ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರವು ದೊಡ್ಡದಾಗಿದ್ದು, ಈ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಟ್ಟದಲ್ಲಿ ಅರಿವು ಮೂಡಿಸಬೇಕಿದೆ ಎಂದು ಅವರು ಹೇಳಿದರು.</p>.<p>ಕಾನೂನಿನ ಇತಿಮಿತಿಯೊಳಗೆ ಸಾಧ್ಯವಾಗುವ ಪ್ರಕರಣಗಳನ್ನು ಎರಡೂ ಕಡೆಯಿಂದ ಕಕ್ಷಿದಾರರು,<br />ವಕೀಲರ ಸಮ್ಮುಖದಲ್ಲಿ ಇತ್ಯರ್ಥಪಡಿಸಲಾಗುತ್ತದೆ. ಇದಕ್ಕೆ ವಕೀಲರು ಸಂಪೂರ್ಣ ಸಹಕಾರ<br />ನೀಡುತ್ತಿದ್ದಾರೆ ಎಂದು ನುಡಿದರು.</p>.<p>ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ಮಾತನಾಡಿ, ‘ಅದಾಲತ್ನಲ್ಲಿ 22 ವರ್ಷ ಹಳೆಯದಾದ ಸಿವಿಲ್ ಪ್ರಕರಣ ಆಲೂರು ನ್ಯಾಯಾಲಯದಲ್ಲಿ ಬಗೆಹರಿದಿದೆ. ಅದೇ ರೀತಿ ಹಾಸನದಲ್ಲಿ ಕೇವಲ ಒಂದು ತಿಂಗಳ ಹಿಂದೆ ದಾಖಲಾಗಿದ್ದ ವ್ಯಾಜ್ಯವೊಂದು ಇತ್ಯರ್ಥವಾಗಿದೆ. ಇದುಅದಾಲತ್ನ ಶಕ್ತಿಯಾಗಿದೆ’ ಎಂದರು.</p>.<p>ಸಿವಿಲ್, ಕ್ರಿಮಿನಲ್ ಪ್ರಕರಣ, ಚೆಕ್ ಬೌನ್ಸ್ , ಬ್ಯಾಂಕ್ ವಸೂಲಾತಿ, ಮೋಟಾರು ವಾಹನ, ಕೌಟುಂಬಿಕ,<br />ಕಂದಾಯ, ಜನನ ಮತ್ತು ಮರಣ ನೋಂದಣಿ, ಜೀವನಾಂಶ ಪ್ರಕರಣ ಹಾಗೂ ಇನ್ನಿತರ ಲಘು ಕ್ರಿಮಿನಲ್<br />ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣ<br />ಇತ್ಯರ್ಥ ಪಡಿಸಲಾಗಿದೆ. ಅದಾಲತ್ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತಿದ್ದು, ಕಳೆದ<br />ಮಾರ್ಚ್ನಲ್ಲಿ 4,261 ಪ್ರಕರಣ ಇತ್ಯರ್ಥಪಡಿಸಲಾಗಿತ್ತು ಎಂದು ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಬಿ.ಕೆ ರವಿಕಾಂತ್,<br />ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಪಿ ಶೇಖರ್. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕಾರ್ಲೆ<br />ಮೊಗಣ್ಣಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>