ಜಾನುವಾರುಗಳಿಗೆ ನೀರು ಕುಡಿಸಲೆಂದು ಶೃತಿ ತನ್ನ ನಾಲ್ಕು ವರ್ಷದ ಮಗುನಿಷಾಂತ್ನನ್ನು ಎತ್ತಿಕೊಂಡು ಹೋಗಿದ್ದರು.ಈ ವೇಳೆ ಹೊಂಡಕ್ಕೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಜಾನುವಾರುಗಳ ನೀರಿನ ದಾಹ ತಣಿಸಲು ಹೋಗಿ ಮೃತಪಟ್ಟ ಸುದ್ದಿ ಕೇಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.