<p><strong>ಹಾಸನ:</strong> ‘ಜಲಜೀವನ್ ಮಿಷನ್ ಯೋಜನೆಯಡಿ 2022–23ನೇ ಸಾಲಿನಲ್ಲಿಕೇಂದ್ರ ಸರ್ಕಾರದಿಂದ ಜಿಲ್ಲೆಗೆ ₹1,515 ಕೋಟಿ ವೆಚ್ಚದ ಕಾಮಗಾರಿಗೆಅನುಮೋದನೆ ಸಿಕ್ಕಿದೆ’ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಚ್.ಎಂ.ಸುರೇಶ್<br />ಕುಮಾರ್ ಹೇಳಿದರು.</p>.<p>‘ಜಿಲ್ಲೆಯಲ್ಲಿ 4,35,244 ಗ್ರಾಮೀಣ ಕುಟುಂಬಗಳಿದ್ದು, 2020–21ನೇ ಸಾಲಿನಲ್ಲಿ1,03,939 ಮನೆಗಳಿಗೆ ನಳ ಅಳವಡಿಕೆ ಕಾಮಗಾರಿ ನಡೆಯುತ್ತಿದೆ.2021–22ನೇ ಸಾಲಿನಲ್ಲಿ 51,789 ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಎಂಟೂ ತಾಲ್ಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹2 ಸಾವಿರ ಕೋಟಿ ನೀಡಲಾಗಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ದೇಶದ ಗ್ರಾಮೀಣ ಭಾಗದ ಪ್ರತಿ ಹಳ್ಳಿಗೂ ನೀರು ಪೂರೈಸುವ ಈ ಯೋಜನೆ2019ರ ಆಗಸ್ಟ್ 15ರಿಂದ ಆರಂಭಗೊಂಡಿದ್ದು, ಎಲ್ಲೆಡೆ ಕಾಮಗಾರಿ ನಡೆಯುತ್ತಿದೆ. ಈ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಶೇ 42.5 ಮತ್ತು ರಾಜ್ಯದಿಂದ ಅಷ್ಟೇ ಪಾಲನ್ನು ನೀಡಲಾಗುತ್ತಿದೆ. ದೇಶದಲ್ಲಿ ಗ್ರಾಮೀಣ ಕುಟುಂಬಗಳ ಸಂಖ್ಯೆ 19.30 ಕೋಟಿ ಇದ್ದು, ಹಂತ ಹಂತವಾಗಿ ಪ್ರತಿ ಮನೆಗೂ ನೀರು ನೀಡುವ ಕೆಲಸ ಆಗುತ್ತಿದೆ’ ಎಂದು ವಿವರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ರಾಜ್ಯ ಪರಿಷತ್ ಸದಸ್ಯ ಮಾಯಣ್ಣ, ಆಲೂರು ಮಂಡಲ ಅಧ್ಯಕ್ಷ ನಾಗರಾಜು, ಅರಸೀಕೆರೆ ಮಂಡಲದ ರಮೇಶ್, ಹೊಳೆನರಸೀಪುರದ ನಾರಾಯಣ್ ಮತ್ತು ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಗಗನ್ ಗಾಂಧಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ಜಲಜೀವನ್ ಮಿಷನ್ ಯೋಜನೆಯಡಿ 2022–23ನೇ ಸಾಲಿನಲ್ಲಿಕೇಂದ್ರ ಸರ್ಕಾರದಿಂದ ಜಿಲ್ಲೆಗೆ ₹1,515 ಕೋಟಿ ವೆಚ್ಚದ ಕಾಮಗಾರಿಗೆಅನುಮೋದನೆ ಸಿಕ್ಕಿದೆ’ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಚ್.ಎಂ.ಸುರೇಶ್<br />ಕುಮಾರ್ ಹೇಳಿದರು.</p>.<p>‘ಜಿಲ್ಲೆಯಲ್ಲಿ 4,35,244 ಗ್ರಾಮೀಣ ಕುಟುಂಬಗಳಿದ್ದು, 2020–21ನೇ ಸಾಲಿನಲ್ಲಿ1,03,939 ಮನೆಗಳಿಗೆ ನಳ ಅಳವಡಿಕೆ ಕಾಮಗಾರಿ ನಡೆಯುತ್ತಿದೆ.2021–22ನೇ ಸಾಲಿನಲ್ಲಿ 51,789 ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಎಂಟೂ ತಾಲ್ಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹2 ಸಾವಿರ ಕೋಟಿ ನೀಡಲಾಗಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ದೇಶದ ಗ್ರಾಮೀಣ ಭಾಗದ ಪ್ರತಿ ಹಳ್ಳಿಗೂ ನೀರು ಪೂರೈಸುವ ಈ ಯೋಜನೆ2019ರ ಆಗಸ್ಟ್ 15ರಿಂದ ಆರಂಭಗೊಂಡಿದ್ದು, ಎಲ್ಲೆಡೆ ಕಾಮಗಾರಿ ನಡೆಯುತ್ತಿದೆ. ಈ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಶೇ 42.5 ಮತ್ತು ರಾಜ್ಯದಿಂದ ಅಷ್ಟೇ ಪಾಲನ್ನು ನೀಡಲಾಗುತ್ತಿದೆ. ದೇಶದಲ್ಲಿ ಗ್ರಾಮೀಣ ಕುಟುಂಬಗಳ ಸಂಖ್ಯೆ 19.30 ಕೋಟಿ ಇದ್ದು, ಹಂತ ಹಂತವಾಗಿ ಪ್ರತಿ ಮನೆಗೂ ನೀರು ನೀಡುವ ಕೆಲಸ ಆಗುತ್ತಿದೆ’ ಎಂದು ವಿವರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ರಾಜ್ಯ ಪರಿಷತ್ ಸದಸ್ಯ ಮಾಯಣ್ಣ, ಆಲೂರು ಮಂಡಲ ಅಧ್ಯಕ್ಷ ನಾಗರಾಜು, ಅರಸೀಕೆರೆ ಮಂಡಲದ ರಮೇಶ್, ಹೊಳೆನರಸೀಪುರದ ನಾರಾಯಣ್ ಮತ್ತು ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಗಗನ್ ಗಾಂಧಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>