ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪರವಾಗಿ ಬೇಲೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು ‘ದೇಶದಾದ್ಯಂತ ಚುನಾವಣೆ ನಡೆಯುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ಮುಂಚಿತವಾಗಿಯೇ ಹೆಲಿಕಾಪ್ಟರ್ಗಳನ್ನು ಬುಕ್ ಮಾಡಿಕೊಂಡಿವೆ. ಆದರೆ, ಕುಮಾರಸ್ವಾಮಿ ಅವರು ಹೆಲಿಕಾಪ್ಟರ್ಗಳನ್ನು ಮುಂಚೆಯೇ ಬುಕ್ ಮಾಡಿಕೊಳ್ಳದೇ ಈಗ ಮೋದಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.