<p><strong>ಹೊಳೆನರಸೀಪುರ</strong>: ಪಟ್ಟಣ ಪುರಸಭೆಯ ನೂತನ ಅಧ್ಯಕ್ಷರಾಗಿ ದೇವಾಂಗ ಜನಾಂಗದ ಎ. ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ ಎಚ್.ಕೆ. ಪ್ರಸನ್ನ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ಶುಕ್ರವಾರ ಚುನಾವಣೆ ನಡೆಯಿತು. ಪುರಸಭೆಯ ವಾರ್ಡ್ ನಂ 8ರ ಸದಸ್ಯ ಎ.ಜಗನ್ನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಆಗಿದ್ದ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಘೋಷಿಸಿದರು.</p>.<p>ಪುರಸಭೆಯ ಆಡಳಿತಾವಧಿ ನ.8ಕ್ಕೆ ಮುಗಿಯುತ್ತಿದೆ ಎಂದು ತಿಳಿಸಿದ ತಹಶೀಲ್ದಾರ್, ಆಡಳಿತಾಧಿಕಾರಿ ನೇಮಕಕ್ಕೆ ನ್ಯಾಯಾಲಯದಲ್ಲಿ ತಡೆ ಸಿಕ್ಕರೆ ಇವರು ಅಧ್ಯಕ್ಷರಾಗಿ ಮುಂದುವರೆಯಲು ಅವಕಾಶ ಇರುತ್ತದೆ ಎಂದರು.</p>.<p>ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ದೇವಾಂಗ ಜನಾಂಗದ ಎ. ಜಗನ್ನಾಥ್ ಪಟ್ಟಣದಲ್ಲಿ ಸಾರ್ವಜನಿಕರಿಗೆ ಪುರಸಭೆಯಿಂದ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲು ಶ್ರಮಿಸುತ್ತೇನೆ ಎಂದರು.</p>.<p>ಪುರಸಭೆಯ ನೂತನ ತಂಡದ 5 ವರ್ಷದ ಆಡಳಿತ ನವಂಬರ್ 11, 2020 ಕ್ಕೆ ಪ್ರಾರಂಭವಾಗಿತ್ತು. ಒಟ್ಟು 58 ತಿಂಗಳ ಅವಧಿಗೆ 6 ಜನ ಅಧ್ಯಕ್ಷರಾದಂತಾಯಿತು. ನೂತನ ಅಧ್ಯಕ್ಷ ಎ. ಜಗನ್ನಾಥ್ ಅವರನ್ನು ಪುರಸಭೆಯ ಮಾಜಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ಅಭಿಮಾನಿಗಳು, ಅಭಿನಂದಿಸಿದರು.</p>
<p><strong>ಹೊಳೆನರಸೀಪುರ</strong>: ಪಟ್ಟಣ ಪುರಸಭೆಯ ನೂತನ ಅಧ್ಯಕ್ಷರಾಗಿ ದೇವಾಂಗ ಜನಾಂಗದ ಎ. ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ ಎಚ್.ಕೆ. ಪ್ರಸನ್ನ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ಶುಕ್ರವಾರ ಚುನಾವಣೆ ನಡೆಯಿತು. ಪುರಸಭೆಯ ವಾರ್ಡ್ ನಂ 8ರ ಸದಸ್ಯ ಎ.ಜಗನ್ನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಆಗಿದ್ದ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಘೋಷಿಸಿದರು.</p>.<p>ಪುರಸಭೆಯ ಆಡಳಿತಾವಧಿ ನ.8ಕ್ಕೆ ಮುಗಿಯುತ್ತಿದೆ ಎಂದು ತಿಳಿಸಿದ ತಹಶೀಲ್ದಾರ್, ಆಡಳಿತಾಧಿಕಾರಿ ನೇಮಕಕ್ಕೆ ನ್ಯಾಯಾಲಯದಲ್ಲಿ ತಡೆ ಸಿಕ್ಕರೆ ಇವರು ಅಧ್ಯಕ್ಷರಾಗಿ ಮುಂದುವರೆಯಲು ಅವಕಾಶ ಇರುತ್ತದೆ ಎಂದರು.</p>.<p>ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ದೇವಾಂಗ ಜನಾಂಗದ ಎ. ಜಗನ್ನಾಥ್ ಪಟ್ಟಣದಲ್ಲಿ ಸಾರ್ವಜನಿಕರಿಗೆ ಪುರಸಭೆಯಿಂದ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲು ಶ್ರಮಿಸುತ್ತೇನೆ ಎಂದರು.</p>.<p>ಪುರಸಭೆಯ ನೂತನ ತಂಡದ 5 ವರ್ಷದ ಆಡಳಿತ ನವಂಬರ್ 11, 2020 ಕ್ಕೆ ಪ್ರಾರಂಭವಾಗಿತ್ತು. ಒಟ್ಟು 58 ತಿಂಗಳ ಅವಧಿಗೆ 6 ಜನ ಅಧ್ಯಕ್ಷರಾದಂತಾಯಿತು. ನೂತನ ಅಧ್ಯಕ್ಷ ಎ. ಜಗನ್ನಾಥ್ ಅವರನ್ನು ಪುರಸಭೆಯ ಮಾಜಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ಅಭಿಮಾನಿಗಳು, ಅಭಿನಂದಿಸಿದರು.</p>