<p><strong>ಹೊಳೆನರಸೀಪುರ</strong>: ಇಲ್ಲಿನ ನ್ಯಾಯಾಲಯದ ಹೊರ ಆವರಣದ ಶೌಚಾಲಯದಲ್ಲಿ ಶನಿವಾರ ತಾಲ್ಲೂಕಿನ ತಟ್ಟೇಕೆರೆ ಗ್ರಾಮದ ಶಿವಕುಮಾರ ತನ್ನ ಪತ್ನಿ ಚೈತ್ರಾ (24) ಕತ್ತು ಕೊಯ್ದು ಕೊಲೆ ಮಾಡಿದ್ದಾರೆ.</p>.<p>ಚನ್ನರಾಯಪಟ್ಟಣ ತಾಲ್ಲೂಕಿನ ಅವ್ವಾರಹಳ್ಳಿಯ ಚೈತ್ರಾ ಹಾಗೂ ಶಿವಕುಮಾರ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 3 ವರ್ಷಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ವಿಚ್ಛೇದನ ಬಯಸಿ ಲೋಕ ಅದಾಲತ್ನಲ್ಲಿ ರಾಜಿ ಸಂಧಾನಕ್ಕಾಗಿ ಅರ್ಜಿ ಸಲ್ಲಿಸಿದ್ದರು.</p>.<p>ಇಲ್ಲಿನ ನ್ಯಾಯಾಲಯದಲ್ಲಿ ಶನಿವಾರ ವಿಚಾರಣೆ ನಡೆಸಿ ಮುಂದಿನ ದಿನಾಂಕ ನೀಡಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ನ್ಯಾಯಾಲಯದಿಂದ ಹೊರಗೆ ಬಂದ ಚೈತ್ರಾ, ತನ್ನ ಎರಡು ವರ್ಷದ ಪುತ್ರಿಯೊಂದಿಗೆ ಶೌಚಾಲಯಕ್ಕೆ ಹೋಗಿದ್ದರು. ಅವರನ್ನು ಹಿಂಬಾಲಿಸಿದ ಶಿವಕುಮಾರ ಪತ್ನಿ ಕತ್ತು ಕೊಯ್ದು ಓಡಿ ಹೋಗುತ್ತಿದ್ದಾಗ ಪೊಲೀಸರು ಬಂಧಿಸಿದರು.</p>.<p>ಚೈತ್ರಾ ಅವರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು.</p>.<p>‘ಶಿವಕುಮಾರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಿಂದ ಚೈತ್ರಾ ತನ್ನ ಮಕ್ಕಳನ್ನು ತವರು ಮನೆಯಲ್ಲಿ ಬಿಟ್ಟು ಬೆಂಗಳೂರಿನ ಗಾರ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು’ ಎಂದು ಚೈತ್ರಾ ಅವರ ಚಿಕ್ಕಪ್ಪ ಜವರೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ಇಲ್ಲಿನ ನ್ಯಾಯಾಲಯದ ಹೊರ ಆವರಣದ ಶೌಚಾಲಯದಲ್ಲಿ ಶನಿವಾರ ತಾಲ್ಲೂಕಿನ ತಟ್ಟೇಕೆರೆ ಗ್ರಾಮದ ಶಿವಕುಮಾರ ತನ್ನ ಪತ್ನಿ ಚೈತ್ರಾ (24) ಕತ್ತು ಕೊಯ್ದು ಕೊಲೆ ಮಾಡಿದ್ದಾರೆ.</p>.<p>ಚನ್ನರಾಯಪಟ್ಟಣ ತಾಲ್ಲೂಕಿನ ಅವ್ವಾರಹಳ್ಳಿಯ ಚೈತ್ರಾ ಹಾಗೂ ಶಿವಕುಮಾರ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 3 ವರ್ಷಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ವಿಚ್ಛೇದನ ಬಯಸಿ ಲೋಕ ಅದಾಲತ್ನಲ್ಲಿ ರಾಜಿ ಸಂಧಾನಕ್ಕಾಗಿ ಅರ್ಜಿ ಸಲ್ಲಿಸಿದ್ದರು.</p>.<p>ಇಲ್ಲಿನ ನ್ಯಾಯಾಲಯದಲ್ಲಿ ಶನಿವಾರ ವಿಚಾರಣೆ ನಡೆಸಿ ಮುಂದಿನ ದಿನಾಂಕ ನೀಡಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ನ್ಯಾಯಾಲಯದಿಂದ ಹೊರಗೆ ಬಂದ ಚೈತ್ರಾ, ತನ್ನ ಎರಡು ವರ್ಷದ ಪುತ್ರಿಯೊಂದಿಗೆ ಶೌಚಾಲಯಕ್ಕೆ ಹೋಗಿದ್ದರು. ಅವರನ್ನು ಹಿಂಬಾಲಿಸಿದ ಶಿವಕುಮಾರ ಪತ್ನಿ ಕತ್ತು ಕೊಯ್ದು ಓಡಿ ಹೋಗುತ್ತಿದ್ದಾಗ ಪೊಲೀಸರು ಬಂಧಿಸಿದರು.</p>.<p>ಚೈತ್ರಾ ಅವರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು.</p>.<p>‘ಶಿವಕುಮಾರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಿಂದ ಚೈತ್ರಾ ತನ್ನ ಮಕ್ಕಳನ್ನು ತವರು ಮನೆಯಲ್ಲಿ ಬಿಟ್ಟು ಬೆಂಗಳೂರಿನ ಗಾರ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು’ ಎಂದು ಚೈತ್ರಾ ಅವರ ಚಿಕ್ಕಪ್ಪ ಜವರೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>