ಕೇಂದ್ರದ ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಮೇಲೆ ಬಲಪ್ರಯೋಗ ಮಾಡುತ್ತಿದ್ದು, ರೈತರ ಹತ್ಯೆಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವುದರಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರ ರೈತರ ಪರ ನಿಲುವು ತೋರದೆ ಬಂಡವಾಳಶಾಹಿಗಳ ಪರವಾಗಿ ಕಾನೂನು ರೂಪಿಸಿ ಕಾರ್ಪೋರೇಟ್ ಗುಲಾಮಗಿರಿ ಮಾಡುತ್ತಿದೆ ಎಂದು ದೂರಿದರು.