ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹತ್ಯೆ: ನ್ಯಾಯಾಂಗ ತನಿಖೆಗೆ ಒತ್ತಾಯ

Last Updated 4 ಅಕ್ಟೋಬರ್ 2021, 15:15 IST
ಅಕ್ಷರ ಗಾತ್ರ

ಹಾಸನ: ಉತ್ತರ ಪ್ರದೇಶದಲ್ಲಿ ಪ್ರತಿಭಟನೆನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ಪಡೆಯ ವಾಹನ ಹತ್ತಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ವಿವಿಧಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು.

ನಗರದ ಹೇಮಾವತಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಕಾರರು ಘಟನೆ ಖಂಡಿಸಿ, ಕೇಂದ್ರಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಅಜಯ ಮಿಶ್ರಾ ಅವರ ಮಗ ಇರುವ ಹಾಗೂ ಅವರ ಬೆಂಗಾವಲು ವಾಹನವನ್ನು ಪ್ರತಿಭಟನೆ ನಿರತರೈತರ ಮೇಲೆ ಹತ್ತಿಸಿ ಕೊಲೆ ಮಾಡಲಾಗಿದೆ. ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ವಜಾಮಾಡಬೇಕು. ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಉತ್ತರ ಪ್ರದೇಶದಲ್ಲಿ ಹಲವು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದರೈತ ವಿರೋಧಿ, ಕೃಷಿ ವಿರೋಧಿ ಕಾಯ್ದೆಗಳ ವಿರುದ್ಧ ಕಳೆದ ಹತ್ತು ತಿಂಗಳಿಂದ ಶಾಂತಿಯುತವಾಗಿನಡೆಯುತ್ತಿರುವ ಹೋರಾಟವನ್ನು ಮಾತುಕತೆಯ ಮೂಲಕ ಎದುರಿಸಲು ಆಗದೆ ಈ ರೀತಿಯ ಸೇಡುತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆಪಡೆಯಬೇಕು. ಹತ್ಯೆಯಾದ ರೈತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು. ಇಲ್ಲದಿದ್ದರೆದೇಶದಾದ್ಯಂತ ರೈತ ಸಂಘಟನೆಗಳು ಉಗ್ರವಾಗಿ ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಕೆನೀಡಿದರು.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಮೇಲೆ ಬಲಪ್ರಯೋಗ ಮಾಡುತ್ತಿದ್ದು, ರೈತರ ಹತ್ಯೆಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವುದರಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರ ರೈತರ ಪರ ನಿಲುವು ತೋರದೆ ಬಂಡವಾಳಶಾಹಿಗಳ ಪರವಾಗಿ ಕಾನೂನು ರೂಪಿಸಿ ಕಾರ್ಪೋರೇಟ್‌ ಗುಲಾಮಗಿರಿ ಮಾಡುತ್ತಿದೆ ಎಂದು ದೂರಿದರು.

ಈ ಸಂಬಂಧ ಜಿಲ್ಲಾಧಿಕಾರಿ ಆರ್‌.ಗಿರೀಶ್ ಅವರು ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ
ಮನವಿ ಅರ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT