ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ನಾಯಿ ಜಗಳಕ್ಕೆ ವ್ಯಕ್ತಿ ಕೊಲೆ: ಇಬ್ಬರ ಬಂಧನ

ಗಲಾಟೆ ಬಿಡಿಸಲು ಬಂದ ಮಗಳು, ಅಳಿಯನ ಸ್ಥಿತಿ ಗಂಭೀರ
Last Updated 25 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಸಕಲೇಶಪುರ: ನಾಯಿ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಇರುವ ಘಟನೆ ತಾಲ್ಲೂಕಿನ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಗರವಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಗ್ರಾಮದ ನಿವಾಸಿ ಗಣೇಶ್ (50) ಕೊಲೆಯಾದ ವ್ಯಕ್ತಿ. ಇದೇ ಗ್ರಾಮದ ರಘು ಎಂಬುವವರ ನಾಯಿ ಗಣೇಶ್ ಅವರನ್ನು ಕಚ್ಚಲು ಹೋಗಿದೆ. ನಾಯಿ ವಿಚಾರವಾಗಿ ಗಣೇಶ್ ಮತ್ತು ರಘು ನಡುವೆ ಮಾತಿನ ಚಕಮಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಯಲ್ಲಿ ಅಂತ್ಯವಾಗಿದೆ.

ಗಲಾಟೆಯನ್ನು ಬಿಡಿಸಲು ಬಂದ ಗಣೇಶ್ ಅವರ ಮಗಳು ವಿಶಾಲಾಕ್ಷಿ ಅಳಿಯ ಉಮೇಶ್ ಅವರಿಗೂ ಕತ್ತಿ ಹಾಗೂ ದೊಣ್ಣೆಯಿಂದ ಹೊಡೆತ ಬಿದ್ದಿದ್ದು ಇಲ್ಲಿಯ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ ಗೋಪಿ, ಇನ್‌ಸ್ಪೆಕ್ಟರ್ ಗಿರೀಶ್, ಗ್ರಾಮಾಂತರ ಠಾಣೆ ಪಿಎಸ್ಐ ಚಂದ್ರಶೇಖರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿಗಳಾದ ರಘು ಹಾಗೂ ಪರಮೇಶ್ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT