<p><strong>ಹಾಸನ</strong>: ನೆರೆ ರಾಜ್ಯದಿಂದ ಬಂದು ಸಕಲೇಶಪುರ–ಆಲೂರು ವಿಧಾನಸಭಾ ಕ್ಷೇತ್ರದಲ್ಲಿ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ದಲಿತಪರ ಹೋರಾಟಗಾರರ ಒಕ್ಕೂಟದ ಅಧ್ಯಕ್ಷ ದಿನೇಶ್ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವ, ಮುರಳಿ ಮೋಹನ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಗಡೀಪಾರು ಮಾಡುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.</p>.<p>ಜ.16ರಂದು ಸಕಲೇಶಪುರದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಜನಸ್ಪಂದನ ಸಭೆ ನಡೆಸಿದ್ದು, ಅಂದು ಸಂಜೆ ಅಧಿಕಾರಿಗಳ ಸಭೆಗೆ ತೆರಳುತ್ತಿದ್ದ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು.</p>.<p>ಸಚಿವರೊಂದಿಗೆ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ಮುರಳಿ ಮೋಹನ್ ಅವರು ಗೇಟ್ ಮುಂದೆ ತಡೆದು, ಏಕವಚನದಲ್ಲಿ ನಿಂದಿಸಿ, ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮುರುಳಿ ಮೋಹನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆ ನಡೆದ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಸಿಪಿಐ ವಿರುದ್ಧವೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಈ ವಿಚಾರವನ್ನು ಕಾಂಗ್ರೆಸ್ ಜಿಲ್ಲಾ ಹಾಗೂ ರಾಜ್ಯ ಘಟಕದ ನಾಯಕರು ಗಂಭೀರವಾಗಿ ಪರಿಗಣಿಸಿ ಮುರುಳಿ ಮೋಹನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಪಕ್ಷದ ನಾಯಕರ ಭದ್ರತೆ ಮತ್ತು ಗೌರವವನ್ನು ಕಾಪಾಡುವುದು ಪಕ್ಷದ ಕರ್ತವ್ಯ ಎಂದು ತಿಳಿಸಿದರು.</p>.<p>ವಿಠಲ, ರಮೇಶ್, ಜಗದೀಶ್, ಶಿವಣ್ಣ, ನಾಗರಾಜ್, ಮಧುಸೂದನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನೆರೆ ರಾಜ್ಯದಿಂದ ಬಂದು ಸಕಲೇಶಪುರ–ಆಲೂರು ವಿಧಾನಸಭಾ ಕ್ಷೇತ್ರದಲ್ಲಿ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ದಲಿತಪರ ಹೋರಾಟಗಾರರ ಒಕ್ಕೂಟದ ಅಧ್ಯಕ್ಷ ದಿನೇಶ್ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವ, ಮುರಳಿ ಮೋಹನ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಗಡೀಪಾರು ಮಾಡುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.</p>.<p>ಜ.16ರಂದು ಸಕಲೇಶಪುರದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಜನಸ್ಪಂದನ ಸಭೆ ನಡೆಸಿದ್ದು, ಅಂದು ಸಂಜೆ ಅಧಿಕಾರಿಗಳ ಸಭೆಗೆ ತೆರಳುತ್ತಿದ್ದ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು.</p>.<p>ಸಚಿವರೊಂದಿಗೆ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ಮುರಳಿ ಮೋಹನ್ ಅವರು ಗೇಟ್ ಮುಂದೆ ತಡೆದು, ಏಕವಚನದಲ್ಲಿ ನಿಂದಿಸಿ, ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮುರುಳಿ ಮೋಹನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆ ನಡೆದ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಸಿಪಿಐ ವಿರುದ್ಧವೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಈ ವಿಚಾರವನ್ನು ಕಾಂಗ್ರೆಸ್ ಜಿಲ್ಲಾ ಹಾಗೂ ರಾಜ್ಯ ಘಟಕದ ನಾಯಕರು ಗಂಭೀರವಾಗಿ ಪರಿಗಣಿಸಿ ಮುರುಳಿ ಮೋಹನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಪಕ್ಷದ ನಾಯಕರ ಭದ್ರತೆ ಮತ್ತು ಗೌರವವನ್ನು ಕಾಪಾಡುವುದು ಪಕ್ಷದ ಕರ್ತವ್ಯ ಎಂದು ತಿಳಿಸಿದರು.</p>.<p>ವಿಠಲ, ರಮೇಶ್, ಜಗದೀಶ್, ಶಿವಣ್ಣ, ನಾಗರಾಜ್, ಮಧುಸೂದನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>