<p><strong>ಹಾಸನ:</strong> ಲೇಖಕಿ ಬಾನು ಮುಷ್ತಾಕ್ ಅವರಿಗೆ ನಗರದ ಅವರ ನಿವಾಸದಲ್ಲಿ ಬುಧವಾರ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದ ಮೈಸೂರು ಜಿಲ್ಲಾಡಳಿತ, ನಾಡಹಬ್ಬ ದಸರಾ ಉತ್ಸವವನ್ನು ಉದ್ಘಾಟಿಸಲು ಅಧಿಕೃತವಾಗಿ ಆಹ್ವಾನಿಸಿತು.</p>.<p>ದಸರಾ ವಿಶೇಷಾಧಿಕಾರಿಯೂ ಆದ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ದಸರಾ ಉತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿದರು.</p>.<p>ಈ ವೇಳೆ ಮಾತನಾಡಿದ ಲೇಖಕಿ, ‘ಇದೊಂದು ರೀತಿ ಸಾಂಕ್ರಾಮಿಕ ಸಂತೋಷ. ಎಲ್ಲೆಡೆ ಸಂಭ್ರಮವಿದೆ. ಆಹ್ವಾನವನ್ನು ನೀಡಿದ ನಾಡಿನ ಸಮಸ್ತ ಕನ್ನಡಿಗರಿಗೆ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸುತ್ತೇನೆ’ ಎಂದರು.</p>.<p>‘ಸೆ.22ಕ್ಕೂ ಮೊದಲು ಮೈಸೂರಿಗೆ ತೆರಳುವ ಕುರಿತು ಚಿಂತಿಸಿಲ್ಲ. ದಸರಾ ಉದ್ಘಾಟನೆಗೆ ಮುನ್ನ ವಿದೇಶ ಪ್ರವಾಸಕ್ಕೆ ತೆರಳಬೇಕು. ಬಳಿಕ ಮೈಸೂರು ಜಿಲ್ಲಾಡಳಿತದೊಂದಿಗೆ ಮಾತನಾಡಿ ತಿಳಿಸುವೆ’ ಎಂದರು.</p>.<p>ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, ‘ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಸ್ವಾಗತ ಸಮಿತಿ ಸದಸ್ಯರೊಂದಿಗೆ ಬಂದು ಆಹ್ವಾನಿಸಲಾಗಿದೆ. ದಸರಾ ಉದ್ಘಾಟಿಸಲು ಸಂತಸದಿಂದ ಒಪ್ಪಿದ್ದಾರೆ. ಮೈಸೂರಿಗೆ ಬರುವಾಗಲೂ ಜಿಲ್ಲಾಡಳಿತ ಗೌರವಪೂರ್ವಕವಾಗಿ ಸ್ವಾಗತಿಸಲಿದೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ತನ್ವಿರ್ ಆಸಿಫ್, ಬಾನು ಮುಷ್ತಾಕ್ ಅವರ ಪತಿ ಮೊಹಿಯುದ್ದೀನ್ ಮುಷ್ತಾಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಲೇಖಕಿ ಬಾನು ಮುಷ್ತಾಕ್ ಅವರಿಗೆ ನಗರದ ಅವರ ನಿವಾಸದಲ್ಲಿ ಬುಧವಾರ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದ ಮೈಸೂರು ಜಿಲ್ಲಾಡಳಿತ, ನಾಡಹಬ್ಬ ದಸರಾ ಉತ್ಸವವನ್ನು ಉದ್ಘಾಟಿಸಲು ಅಧಿಕೃತವಾಗಿ ಆಹ್ವಾನಿಸಿತು.</p>.<p>ದಸರಾ ವಿಶೇಷಾಧಿಕಾರಿಯೂ ಆದ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ದಸರಾ ಉತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿದರು.</p>.<p>ಈ ವೇಳೆ ಮಾತನಾಡಿದ ಲೇಖಕಿ, ‘ಇದೊಂದು ರೀತಿ ಸಾಂಕ್ರಾಮಿಕ ಸಂತೋಷ. ಎಲ್ಲೆಡೆ ಸಂಭ್ರಮವಿದೆ. ಆಹ್ವಾನವನ್ನು ನೀಡಿದ ನಾಡಿನ ಸಮಸ್ತ ಕನ್ನಡಿಗರಿಗೆ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸುತ್ತೇನೆ’ ಎಂದರು.</p>.<p>‘ಸೆ.22ಕ್ಕೂ ಮೊದಲು ಮೈಸೂರಿಗೆ ತೆರಳುವ ಕುರಿತು ಚಿಂತಿಸಿಲ್ಲ. ದಸರಾ ಉದ್ಘಾಟನೆಗೆ ಮುನ್ನ ವಿದೇಶ ಪ್ರವಾಸಕ್ಕೆ ತೆರಳಬೇಕು. ಬಳಿಕ ಮೈಸೂರು ಜಿಲ್ಲಾಡಳಿತದೊಂದಿಗೆ ಮಾತನಾಡಿ ತಿಳಿಸುವೆ’ ಎಂದರು.</p>.<p>ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, ‘ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಸ್ವಾಗತ ಸಮಿತಿ ಸದಸ್ಯರೊಂದಿಗೆ ಬಂದು ಆಹ್ವಾನಿಸಲಾಗಿದೆ. ದಸರಾ ಉದ್ಘಾಟಿಸಲು ಸಂತಸದಿಂದ ಒಪ್ಪಿದ್ದಾರೆ. ಮೈಸೂರಿಗೆ ಬರುವಾಗಲೂ ಜಿಲ್ಲಾಡಳಿತ ಗೌರವಪೂರ್ವಕವಾಗಿ ಸ್ವಾಗತಿಸಲಿದೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ತನ್ವಿರ್ ಆಸಿಫ್, ಬಾನು ಮುಷ್ತಾಕ್ ಅವರ ಪತಿ ಮೊಹಿಯುದ್ದೀನ್ ಮುಷ್ತಾಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>