<p><strong>ಹಾಸನ: </strong>ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಗುರು, ಶಿಷ್ಯರಾದ ಸಂಸದ ಎಚ್.ಡಿ.ದೇವೇಗೌಡ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮೈತ್ರಿ ಕೂಟದ ಅಭ್ಯರ್ಥಿ ಪರ ಜಂಟಿ ಚುನಾವಣಾ ಪ್ರಚಾರ ಮಾಡಿದರು.</p>.<p>ಒಂದೇ ಹೆಲಿಕಾಪ್ಟರ್ ನಲ್ಲಿ ಓಡಾಡುವುದರ ಜೊತೆಗೆ ಒಂದೇ ವೇದಿಕೆ ಹಂಚಿಕೊಂಡು, ಒಬ್ಬರೇ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದನ್ನು ಕಂಡ ಜನರು ಶಿಳ್ಳೆ ಹೊಡೆದು ಸಂಭ್ರಮಿಸಿದರು.</p>.<p>ಅರಸೀಕೆರೆ ತಾಲ್ಲೂಕು ಬಾಣಾವರದಿಂದ ಪ್ರಚಾರ ಆರಂಭಿಸಿದ ಉಭಯ ನಾಯಕರು, ಗಂಡಸಿ, ಅರಕಲಗೂಡು ಮತ್ತು ಹಳ್ಳಿ ಮೈಸೂರಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು, ಪ್ರಜ್ವಲ್ ರೇವಣ್ಣ ಬೆಂಬಲಿಸುವಂತೆ ಮನವಿ ಮಾಡಿದರು.</p>.<p>ಈ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ನಾಯಕರು, ‘ ಮೋದಿ ಒಬ್ಬ ಸರ್ವಾಧಿಕಾರಿ, ಮಹಾನ್ ಸುಳ್ಳುಗಾರ, ಏಕ ಚಕ್ರಾಧಿಪತ್ಯ ನಡೆಸಲು ಹೊರಟಿದ್ದಾರೆ. ಇಂಥವರು ಮತ್ತೆ ಪ್ರಧಾನಿಯಾದರೆ ದೇಶ ಉಳಿಯಲ್ಲ. ಪ್ರಜಾತಂತ್ರ ಉಳಿಯಲ್ಲ’ ಎಂದು ತೀವ್ರ ವಾಗ್ದಾಳಿ ನಡೆಸಿದರು.</p>.<p>ಎ.ಮಂಜು ಪಕ್ಷ ದ್ರೋಹ ಮಾಡಿ ಬಿಜೆಪಿಗೆ ಹೋಗಿದ್ದು, ಅವರಿಗೆ ನಾಡಿನ ಜನರು ಧಿಕ್ಕಾರ ಹಾಕಬೇಕು. ಯಾವುದೇ ಕಾರಣಕ್ಕೂ ಆತನಿಗೆ ಮತ ಹಾಕಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ಗಂಡಸಿಯಲ್ಲಿ ಮಾತನಾಡಿದ ಎಚ್.ಡಿ.ದೇವೇಗೌಡ, ‘ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ದೇಶ, ಪ್ರಜಾಪ್ರಭುತ್ವ, ರೈತರ ಉಳಿವಿಗಾಗಿ ಏಕ ಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿರುವ ಮೋದಿ ಹಾಗೂ ಬಿಜೆಪಿ ಶಕ್ತಿ ಕುಗ್ಗಿಸಲು ಶಪಥ ಮಾಡಿ ಒಂದಾಗಿದ್ದೇವೆ’ ಎಂದರು.</p>.<p>‘ಗಂಡಸಿಯನ್ನು ತಾಲ್ಲೂಕು ಮಾಡಬೇಕೆನ್ನುವ ಬೇಡಿಕೆ ಇದೆ. ಇದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ತರಲಾಗುವುದು. ತುಮಕೂರು ಜಿಲ್ಲೆಯ ಜನರ ನೀರಿನ ಸಮಸ್ಯೆ ಬಗ್ಗೆಯೂ ಅರಿವು ಇದೆ. ಎಲ್ಲ ಸಮಸ್ಯೆಗೂ ಪರಿಹಾರ ಇದೆ ಎಂದರು.</p>.<p>ಸಿದ್ದರಾಮಯ್ಯ ಮಾತನಾಡಿ, ‘ಐದು ವರ್ಷದ ಆಡಳಿತಾವಧಿಯಲ್ಲಿ ಮೋದಿ ಅವರು, ಕೊಟ್ಟ ಮಾತು ಉಳಿಸಿಕೊಂಡಿಲ್ಲ, ನಂಬಿಕೆ ದ್ರೋಹ ಮಾಡಿದ್ದಾರೆ. ಮೋದಿ ಈ ದೇಶಕಂಡ ಮಹಾನ್ ಸುಳ್ಳುಗಾರ. ಚೌಕಿದಾರ್ ಅಲ್ಲ ಭ್ರಷ್ಟಾಚಾರದಲ್ಲಿ ಭಾಗಿದಾರ ಎಂದು ಕಿಡಿಕಾರಿದರು.</p>.<p>ದಲಿತರನ್ನು ಬೆತ್ತಲೆ ಮಾಡಿ ದೌರ್ಜನ್ಯವೆಸಗಲಾಗಿದೆ. ಅಲ್ಪಸಂಖ್ಯಾತರನ್ನು ಗೋ ರಕ್ಷಣೆ ಹೆಸರಲ್ಲಿ ಹತ್ಯೆ ಮಾಡಿದ್ದಾರೆ.</p>.<p>ಕೇಂದ್ರ ಸಚಿವ ಅನಂತ್ ಕುಮಾರ ಹೆಗಡೆ ಸಂವಿಧಾನ ಬದಲಿಸುತ್ತೇನೆ ಎಂದರೆ, ಆರ್ಎಸ್ಎಸ್ ಸರ ಸಂಚಾಲಕ ಮೋಹನ್ ಭಾಗವತ್ ಮೀಸಲಾತಿ ನಿಲ್ಲಿಸಬೇಕು ಎನ್ನುತ್ತಾರೆ. ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಅವರು ಸಂವಿಧಾನ ಬದಲಾವಣೆ ಆಗಬೇಕು ಎಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>27 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇದರಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿಲ್ಲ. ಈಶ್ವರಪ್ಪ ಯೋಗ್ಯತೆಗೆ ಕುರುಬ ಸಮುದಾಯದ ಒಬ್ಬರಿಗೆ ಟಿಕೆಟ್ ಕೊಡಿಸಲು ಆಗಲಿಲ್ಲ ಎಂದು ಅವರನ್ನು ಏಕ ವಚನದಲ್ಲಿ ತರಾಟೆಗೆ ತೆಗೆದುಕೊಂಡರು.</p>.<p>ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಪ್ರಜ್ವಲ್ ರೇವಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಮುಖಂಡರಾದ ಹನುಮಪ್ಪ, ಬಿಳಿಚೌಡಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಗುರು, ಶಿಷ್ಯರಾದ ಸಂಸದ ಎಚ್.ಡಿ.ದೇವೇಗೌಡ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮೈತ್ರಿ ಕೂಟದ ಅಭ್ಯರ್ಥಿ ಪರ ಜಂಟಿ ಚುನಾವಣಾ ಪ್ರಚಾರ ಮಾಡಿದರು.</p>.<p>ಒಂದೇ ಹೆಲಿಕಾಪ್ಟರ್ ನಲ್ಲಿ ಓಡಾಡುವುದರ ಜೊತೆಗೆ ಒಂದೇ ವೇದಿಕೆ ಹಂಚಿಕೊಂಡು, ಒಬ್ಬರೇ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದನ್ನು ಕಂಡ ಜನರು ಶಿಳ್ಳೆ ಹೊಡೆದು ಸಂಭ್ರಮಿಸಿದರು.</p>.<p>ಅರಸೀಕೆರೆ ತಾಲ್ಲೂಕು ಬಾಣಾವರದಿಂದ ಪ್ರಚಾರ ಆರಂಭಿಸಿದ ಉಭಯ ನಾಯಕರು, ಗಂಡಸಿ, ಅರಕಲಗೂಡು ಮತ್ತು ಹಳ್ಳಿ ಮೈಸೂರಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು, ಪ್ರಜ್ವಲ್ ರೇವಣ್ಣ ಬೆಂಬಲಿಸುವಂತೆ ಮನವಿ ಮಾಡಿದರು.</p>.<p>ಈ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ನಾಯಕರು, ‘ ಮೋದಿ ಒಬ್ಬ ಸರ್ವಾಧಿಕಾರಿ, ಮಹಾನ್ ಸುಳ್ಳುಗಾರ, ಏಕ ಚಕ್ರಾಧಿಪತ್ಯ ನಡೆಸಲು ಹೊರಟಿದ್ದಾರೆ. ಇಂಥವರು ಮತ್ತೆ ಪ್ರಧಾನಿಯಾದರೆ ದೇಶ ಉಳಿಯಲ್ಲ. ಪ್ರಜಾತಂತ್ರ ಉಳಿಯಲ್ಲ’ ಎಂದು ತೀವ್ರ ವಾಗ್ದಾಳಿ ನಡೆಸಿದರು.</p>.<p>ಎ.ಮಂಜು ಪಕ್ಷ ದ್ರೋಹ ಮಾಡಿ ಬಿಜೆಪಿಗೆ ಹೋಗಿದ್ದು, ಅವರಿಗೆ ನಾಡಿನ ಜನರು ಧಿಕ್ಕಾರ ಹಾಕಬೇಕು. ಯಾವುದೇ ಕಾರಣಕ್ಕೂ ಆತನಿಗೆ ಮತ ಹಾಕಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ಗಂಡಸಿಯಲ್ಲಿ ಮಾತನಾಡಿದ ಎಚ್.ಡಿ.ದೇವೇಗೌಡ, ‘ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ದೇಶ, ಪ್ರಜಾಪ್ರಭುತ್ವ, ರೈತರ ಉಳಿವಿಗಾಗಿ ಏಕ ಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿರುವ ಮೋದಿ ಹಾಗೂ ಬಿಜೆಪಿ ಶಕ್ತಿ ಕುಗ್ಗಿಸಲು ಶಪಥ ಮಾಡಿ ಒಂದಾಗಿದ್ದೇವೆ’ ಎಂದರು.</p>.<p>‘ಗಂಡಸಿಯನ್ನು ತಾಲ್ಲೂಕು ಮಾಡಬೇಕೆನ್ನುವ ಬೇಡಿಕೆ ಇದೆ. ಇದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ತರಲಾಗುವುದು. ತುಮಕೂರು ಜಿಲ್ಲೆಯ ಜನರ ನೀರಿನ ಸಮಸ್ಯೆ ಬಗ್ಗೆಯೂ ಅರಿವು ಇದೆ. ಎಲ್ಲ ಸಮಸ್ಯೆಗೂ ಪರಿಹಾರ ಇದೆ ಎಂದರು.</p>.<p>ಸಿದ್ದರಾಮಯ್ಯ ಮಾತನಾಡಿ, ‘ಐದು ವರ್ಷದ ಆಡಳಿತಾವಧಿಯಲ್ಲಿ ಮೋದಿ ಅವರು, ಕೊಟ್ಟ ಮಾತು ಉಳಿಸಿಕೊಂಡಿಲ್ಲ, ನಂಬಿಕೆ ದ್ರೋಹ ಮಾಡಿದ್ದಾರೆ. ಮೋದಿ ಈ ದೇಶಕಂಡ ಮಹಾನ್ ಸುಳ್ಳುಗಾರ. ಚೌಕಿದಾರ್ ಅಲ್ಲ ಭ್ರಷ್ಟಾಚಾರದಲ್ಲಿ ಭಾಗಿದಾರ ಎಂದು ಕಿಡಿಕಾರಿದರು.</p>.<p>ದಲಿತರನ್ನು ಬೆತ್ತಲೆ ಮಾಡಿ ದೌರ್ಜನ್ಯವೆಸಗಲಾಗಿದೆ. ಅಲ್ಪಸಂಖ್ಯಾತರನ್ನು ಗೋ ರಕ್ಷಣೆ ಹೆಸರಲ್ಲಿ ಹತ್ಯೆ ಮಾಡಿದ್ದಾರೆ.</p>.<p>ಕೇಂದ್ರ ಸಚಿವ ಅನಂತ್ ಕುಮಾರ ಹೆಗಡೆ ಸಂವಿಧಾನ ಬದಲಿಸುತ್ತೇನೆ ಎಂದರೆ, ಆರ್ಎಸ್ಎಸ್ ಸರ ಸಂಚಾಲಕ ಮೋಹನ್ ಭಾಗವತ್ ಮೀಸಲಾತಿ ನಿಲ್ಲಿಸಬೇಕು ಎನ್ನುತ್ತಾರೆ. ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಅವರು ಸಂವಿಧಾನ ಬದಲಾವಣೆ ಆಗಬೇಕು ಎಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>27 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇದರಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿಲ್ಲ. ಈಶ್ವರಪ್ಪ ಯೋಗ್ಯತೆಗೆ ಕುರುಬ ಸಮುದಾಯದ ಒಬ್ಬರಿಗೆ ಟಿಕೆಟ್ ಕೊಡಿಸಲು ಆಗಲಿಲ್ಲ ಎಂದು ಅವರನ್ನು ಏಕ ವಚನದಲ್ಲಿ ತರಾಟೆಗೆ ತೆಗೆದುಕೊಂಡರು.</p>.<p>ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಪ್ರಜ್ವಲ್ ರೇವಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಮುಖಂಡರಾದ ಹನುಮಪ್ಪ, ಬಿಳಿಚೌಡಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>