‘ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಫಲಿತಾಂಶ ಹೊರಬೀಳುವ ಮೊದಲೇ ಧರಣಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಎಸ್ಪಿ ಕಾಲಾವಕಾಶ ಕೇಳಿದ್ದರಿಂದ ಸುಮ್ಮನಾಗಬೇಕಾಯಿತು. ಇದುವರೆಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಂಡಿಲ್ಲ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ ಎಂದು ಎಸ್ಪಿ ಜೆಡಿಎಸ್ ದೂರನ್ನು ಕಡೆಗಣಿಸಿರಬಹುದು. ಆದರೆ, ನಾವು ಸುಮ್ಮನೆ ಇರುವುದಿಲ್ಲ. ಪೊಲೀಸ್ ಮಹಾ ನಿರ್ದೇಶಕರೇ ಸ್ಥಳಕ್ಕೆ ಬಂದು ಕ್ರಮ ಕೈಗೊಳ್ಳುವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದರು ಸ್ಪಷ್ಟಪಡಿಸಿದರು.