<p><strong>ಹಾಸನ</strong>: ಆರೈಕೆ ಮಾಡುವವರು ಇಲ್ಲ ಎಂದು ಮನನೊಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಅರೆಹೊಸೂರಿನ ನಿವಾಸಿಗಳಾದ ಡೇವಿಡ್ (80) ಮತ್ತು ಮೇರಿ (73) ವೃದ್ಧ ದಂಪತಿ ನಗರದಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ದಂಪತಿಗೆ ಆಸ್ತಿ, ಮನೆ ಹಾಗೂ ಕಾಫಿ ತೋಟ ಇದ್ದರೂ ವೃದ್ಧಾಪ್ಯದಲ್ಲಿ ನೋಡಿಕೊಳ್ಳುವವರು ಇಲ್ಲದೇ ಒಂಟಿಯಾಗಿದ್ದರು. ಇಬ್ಬರು ಪುತ್ರರಿದ್ದರೂ ತಮ್ಮ ಬಗ್ಗೆ ಸೂಕ್ತ ಗಮನ ಹರಿಸುತ್ತಿಲ್ಲ ಎಂಬ ಬೇಸರ ದಂಪತಿಯನ್ನು ಕಾಡುತ್ತಿತ್ತು ಎನ್ನಲಾಗಿದೆ. ಕೆಲ ದಿನಗಳ ಹಿಂದೆ ವಿರಾಜಪೇಟೆಯ ವೃದ್ಧಾಶ್ರಮದಲ್ಲೂ ಅವರು ಉಳಿದಿದ್ದರು.</p>.<p>ಒಬ್ಬ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದರೆ, ಮತ್ತೊಬ್ಬ ಪುತ್ರ ಊರಿನಲ್ಲೇ ವಾಸವಾಗಿದ್ದಾನೆ. ಶನಿವಾರ ರಾತ್ರಿ ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪ ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹಾಸನ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಠಾಣೆ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಆರೈಕೆ ಮಾಡುವವರು ಇಲ್ಲ ಎಂದು ಮನನೊಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಅರೆಹೊಸೂರಿನ ನಿವಾಸಿಗಳಾದ ಡೇವಿಡ್ (80) ಮತ್ತು ಮೇರಿ (73) ವೃದ್ಧ ದಂಪತಿ ನಗರದಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ದಂಪತಿಗೆ ಆಸ್ತಿ, ಮನೆ ಹಾಗೂ ಕಾಫಿ ತೋಟ ಇದ್ದರೂ ವೃದ್ಧಾಪ್ಯದಲ್ಲಿ ನೋಡಿಕೊಳ್ಳುವವರು ಇಲ್ಲದೇ ಒಂಟಿಯಾಗಿದ್ದರು. ಇಬ್ಬರು ಪುತ್ರರಿದ್ದರೂ ತಮ್ಮ ಬಗ್ಗೆ ಸೂಕ್ತ ಗಮನ ಹರಿಸುತ್ತಿಲ್ಲ ಎಂಬ ಬೇಸರ ದಂಪತಿಯನ್ನು ಕಾಡುತ್ತಿತ್ತು ಎನ್ನಲಾಗಿದೆ. ಕೆಲ ದಿನಗಳ ಹಿಂದೆ ವಿರಾಜಪೇಟೆಯ ವೃದ್ಧಾಶ್ರಮದಲ್ಲೂ ಅವರು ಉಳಿದಿದ್ದರು.</p>.<p>ಒಬ್ಬ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದರೆ, ಮತ್ತೊಬ್ಬ ಪುತ್ರ ಊರಿನಲ್ಲೇ ವಾಸವಾಗಿದ್ದಾನೆ. ಶನಿವಾರ ರಾತ್ರಿ ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪ ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹಾಸನ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಠಾಣೆ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>