<p><strong>ಹಾಸನ</strong>: ರಾಜ್ಯ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಮುಷ್ಕರ ನಿರತ ಸಾರಿಗೆ ಸಂಸ್ಥೆ ನೌಕರರ ಜೊತೆ ಕೂಡಲೇ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸಿಐಟಿಯು ಜಿಲ್ಲಾಧ್ಯಕ್ಷಧರ್ಮೇಶ್ ಒತ್ತಾಯಿಸಿದರು.</p>.<p>ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾವಿರಾರು<br />ನೌಕರರನ್ನು ಕೆಲಸದಿಂದ ವಜಾ, ಅಮಾನತ್ತು ಮತ್ತು ವರ್ಗಾವಣೆ ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿ ಪರಿಹಾರ ಮಾಡಲು ಸಾಧ್ಯವಿರುವ ದಾರಿಗಳನ್ನು ಹುಡುಕುವ ಬದಲು, ಕಾರ್ಮಿಕರನ್ನು ಬಲಿಪಶುಗಳನ್ನಾಗಿ ಮಾಡುವ ಕ್ರಮ ಖಂಡನೀಯ. ಸಾರಿಗೆ ಕಾರ್ಮಿಕರಮೇಲಿನ ದಮನ ಮತ್ತು ದಾಳಿಗಳನ್ನು ಬಿಟ್ಟು ಸೌಹಾರ್ದಯುತವಾಗಿ ಸಮಸ್ಯೆಯನ್ನು ಸರ್ಕಾರ ಮತ್ತುಆಡಳಿತ ವರ್ಗ ಇತ್ಯರ್ಥ ಮಾಡಬೇಕು ಎಂದು ಅಭಿಪ್ರಾಯಪಟ್ಟರು.</p>.<p>ನೌಕರರು ಯಾವುದೇ ಕಠಿಣ ಸಂದರ್ಭಗಳಲ್ಲೂ ರಾಜ್ಯದ ಕೋಟ್ಯಂತರ ಜನರಿಗೆ ಸಾರಿಗೆ ಸೇವೆ ಒದಗಿಸುತ್ತಿದ್ದಾರೆ. ಇಡೀ ದೇಶದಲ್ಲೇ ಅತ್ಯಂತ ಪ್ರಬಲವಾದ ಸಾರ್ವಜನಿಕ ಸಾರಿಗೆ ಜಾಲವನ್ನು ಹೊಂದಿರುವ ಸಾರಿಗೆ ನಿಗಮಗಳ ಕಾರ್ಮಿಕರ ಒಟ್ಟಾರೆಶ್ರಮದಿಂದ ನೂರಾರು ಪ್ರಶಸ್ತಿಗಳನ್ನು ಗಳಿಸಲು ಸಾಧ್ಯವಾಗಿದೆ. ಈ ಬಗ್ಗೆ ಎಲ್ಲಾ ಸಾರಿಗೆ<br />ಕಾರ್ಮಿಕರಿಗೂ ಹೆಮ್ಮೆಯಿದೆ. ಇದನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾರಿಗೆ ಕಾರ್ಮಿಕರು ಬದ್ಧರಾಗಿದ್ದಾರೆ ಎಂದರು.</p>.<p>ಮಾರ್ಚ್ ತಿಂಗಳ ವೇತನ ತಡೆಹಿಡಿದಿರುವ ಆಡಳಿತ ವರ್ಗದ ಕ್ರಮ ಸರಿಯಲ್ಲ. ಕೂಡಲೇ ಕಾರ್ಮಿಕರಿಗೆ ವೇತನ ನೀಡಬೇಕು. ನೌಕರರ ವರ್ಗಾವಣೆಯನ್ನು ಸರ್ಕಾರ ತಕ್ಷಣವೇ ರದ್ದು ಮಾಡಬೇಕು. ಅಮಾನತ್ತುಗೊಂಡಿರುವ ನೌಕರರನ್ನು ಅದೇ ಸ್ಥಾನಕ್ಕೆ ಮರು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಸಾರಿಗೆ ನಿಗಮಗಳ ನೌಕರರ ಫ಼ೆಡರೇಷನ್ ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್. ಮಂಜುನಾಥ್, ಉಪಾಧ್ಯಕ್ಷಸುರೇಶ್, ಖಜಾಂಚಿ ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ರಾಜ್ಯ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಮುಷ್ಕರ ನಿರತ ಸಾರಿಗೆ ಸಂಸ್ಥೆ ನೌಕರರ ಜೊತೆ ಕೂಡಲೇ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸಿಐಟಿಯು ಜಿಲ್ಲಾಧ್ಯಕ್ಷಧರ್ಮೇಶ್ ಒತ್ತಾಯಿಸಿದರು.</p>.<p>ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾವಿರಾರು<br />ನೌಕರರನ್ನು ಕೆಲಸದಿಂದ ವಜಾ, ಅಮಾನತ್ತು ಮತ್ತು ವರ್ಗಾವಣೆ ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿ ಪರಿಹಾರ ಮಾಡಲು ಸಾಧ್ಯವಿರುವ ದಾರಿಗಳನ್ನು ಹುಡುಕುವ ಬದಲು, ಕಾರ್ಮಿಕರನ್ನು ಬಲಿಪಶುಗಳನ್ನಾಗಿ ಮಾಡುವ ಕ್ರಮ ಖಂಡನೀಯ. ಸಾರಿಗೆ ಕಾರ್ಮಿಕರಮೇಲಿನ ದಮನ ಮತ್ತು ದಾಳಿಗಳನ್ನು ಬಿಟ್ಟು ಸೌಹಾರ್ದಯುತವಾಗಿ ಸಮಸ್ಯೆಯನ್ನು ಸರ್ಕಾರ ಮತ್ತುಆಡಳಿತ ವರ್ಗ ಇತ್ಯರ್ಥ ಮಾಡಬೇಕು ಎಂದು ಅಭಿಪ್ರಾಯಪಟ್ಟರು.</p>.<p>ನೌಕರರು ಯಾವುದೇ ಕಠಿಣ ಸಂದರ್ಭಗಳಲ್ಲೂ ರಾಜ್ಯದ ಕೋಟ್ಯಂತರ ಜನರಿಗೆ ಸಾರಿಗೆ ಸೇವೆ ಒದಗಿಸುತ್ತಿದ್ದಾರೆ. ಇಡೀ ದೇಶದಲ್ಲೇ ಅತ್ಯಂತ ಪ್ರಬಲವಾದ ಸಾರ್ವಜನಿಕ ಸಾರಿಗೆ ಜಾಲವನ್ನು ಹೊಂದಿರುವ ಸಾರಿಗೆ ನಿಗಮಗಳ ಕಾರ್ಮಿಕರ ಒಟ್ಟಾರೆಶ್ರಮದಿಂದ ನೂರಾರು ಪ್ರಶಸ್ತಿಗಳನ್ನು ಗಳಿಸಲು ಸಾಧ್ಯವಾಗಿದೆ. ಈ ಬಗ್ಗೆ ಎಲ್ಲಾ ಸಾರಿಗೆ<br />ಕಾರ್ಮಿಕರಿಗೂ ಹೆಮ್ಮೆಯಿದೆ. ಇದನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾರಿಗೆ ಕಾರ್ಮಿಕರು ಬದ್ಧರಾಗಿದ್ದಾರೆ ಎಂದರು.</p>.<p>ಮಾರ್ಚ್ ತಿಂಗಳ ವೇತನ ತಡೆಹಿಡಿದಿರುವ ಆಡಳಿತ ವರ್ಗದ ಕ್ರಮ ಸರಿಯಲ್ಲ. ಕೂಡಲೇ ಕಾರ್ಮಿಕರಿಗೆ ವೇತನ ನೀಡಬೇಕು. ನೌಕರರ ವರ್ಗಾವಣೆಯನ್ನು ಸರ್ಕಾರ ತಕ್ಷಣವೇ ರದ್ದು ಮಾಡಬೇಕು. ಅಮಾನತ್ತುಗೊಂಡಿರುವ ನೌಕರರನ್ನು ಅದೇ ಸ್ಥಾನಕ್ಕೆ ಮರು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಸಾರಿಗೆ ನಿಗಮಗಳ ನೌಕರರ ಫ಼ೆಡರೇಷನ್ ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್. ಮಂಜುನಾಥ್, ಉಪಾಧ್ಯಕ್ಷಸುರೇಶ್, ಖಜಾಂಚಿ ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>