ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 10 ಗಂಟೆಗೆ ಬಿಟ್ಟಗೌಡನಹಳ್ಳಿ ಶಾಂತಿಧಾಮದಲ್ಲಿ ನಡೆಯಲಿದೆ. ಬೇಲೂರು ತಾಲ್ಲೂಕಿನ ಕುಡ್ಲೂರು ಗ್ರಾಮದ ತೋಪೇಗೌಡರು, ಜಿಲ್ಲೆಯಲ್ಲಿ 22 ವರ್ಷ ವಾರ್ತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2006ರಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ನಿರ್ದೇಶಕರಾದ ಎನ್.ಆರ್.ವಿಶುಕುಮಾರ್, ಐ.ಎಂ.ವಿಠಲಮೂರ್ತಿ ಹಾಗೂ ವಾರ್ತಾ ಇಲಾಖೆ ಕಚೇರಿ ಸಿಬ್ಬಂದಿ ಅಂತಿಮ ದರ್ಶನ ಪಡೆದರು.