ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಪೇಗೌಡ ನಿಧನ

Last Updated 23 ಮಾರ್ಚ್ 2021, 14:46 IST
ಅಕ್ಷರ ಗಾತ್ರ

ಹಾಸನ: ನಿವೃತ್ತ ವಾರ್ತಾಧಿಕಾರಿ ತೋಪೇಗೌಡ (72) ಅವರು ತೀವ್ರ ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ಕುವೆಂಪು ನಗರದ ಸ್ವಗ್ರಹದಲ್ಲಿ ನಿಧನರಾದರು. ಅವರಿಗೆ ಪತ್ನಿ,ಮೂವರು ಪುತ್ರಿಯರು ಇದ್ದಾರೆ.

ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 10 ಗಂಟೆಗೆ ಬಿಟ್ಟಗೌಡನಹಳ್ಳಿ ಶಾಂತಿಧಾಮದಲ್ಲಿ ನಡೆಯಲಿದೆ. ಬೇಲೂರು ತಾಲ್ಲೂಕಿನ ಕುಡ್ಲೂರು ಗ್ರಾಮದ ತೋಪೇಗೌಡರು, ಜಿಲ್ಲೆಯಲ್ಲಿ 22 ವರ್ಷ ವಾರ್ತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2006ರಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ನಿರ್ದೇಶಕರಾದ ಎನ್.ಆರ್‌.ವಿಶುಕುಮಾರ್‌, ಐ.ಎಂ.ವಿಠಲಮೂರ್ತಿ ಹಾಗೂ ವಾರ್ತಾ ಇಲಾಖೆ ಕಚೇರಿ ಸಿಬ್ಬಂದಿ ಅಂತಿಮ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT